36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ


ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಫೆ.16 ರಂದು ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರ್ ಶ್ರೀ ಲಕ್ಷ್ಮೀ ನಾರಾಯಾಣ ರಾವ್,  ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ, ಸಂತೋಷ್ ಗೌಡ, ಶಿವರಾಮ್, ಶ್ರೀಮತಿ ಪವಿತ್ರ, ಶ್ರೀಮತಿ ಭವಾನಿ, ಶ್ರೀಮತಿ ಮಂಜುಳಾ ಉಪಸ್ಥಿತರಿದ್ದರು.


ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ  ನಿರ್ವಹಿಸಲಿದ್ದು, ಈ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಹೆಸರು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0825626644, 9663464648, 8147263422

Related posts

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!