24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

ಧರ್ಮಸ್ಥಳ : ಪ್ರಾಚೀನ ಕಾಲದ ನಾಣ್ಯಗಳು ನೋಡಲು ಸಿಗುವುದು ಅಪರೂಪ. ಅಂತಹ ನಾಣ್ಯಗಳನ್ನು ನೋಡುವುದರ ಜೊತೆಗೆ ಅವುಗಳ ಬಗ್ಗೆ ಮಾಹಿತಿ ಪಡೆಯುವ ವ್ಯವಸ್ಥೆಯನ್ನು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಅಚ್ಚುಕಟ್ಟಾಗಿ ಮಾಡಿದ್ದಾರೆ. ಶ್ರೀ ಹೆಗ್ಗಡೆಯವರ ಪುರಾತನ ವಸ್ತುಗಳ ಸಂಗ್ರಹಗಳ ಜೊತೆಗೆ ಮೂಡಿಗೆರೆಯ ಎಂ. ಎಲ್. ಅಶೋಕ್ ಅವರು ಸಂಗ್ರಹಿಸಿದ ಪ್ರಾಚೀನ ಕಾಲದ ನಾಣ್ಯಗಳ ಪ್ರದರ್ಶನವನ್ನು ಆಯೋಜಿಸಿದ್ದು ಶಾಲಾ ಮಕ್ಕಳಿಗೆ, ಆಸಕ್ತರಿಗೆ ನಾಣ್ಯಗಳ ಮೂಲಕ ಇತಿಹಾಸವನ್ನು ತಿಳಿದುಕೊಳ್ಳಲು ಇರುವ ಅವಕಾಶವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣರವರು ಹೇಳಿದರು.

ಅವರು ಧರ್ಮಸ್ಥಳದ ಮಂಜೂಷಾ ಮ್ಯೂಸಿಯಂನಲ್ಲಿ ಫೆ. 17ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ಪ್ರಾಚೀನ ಕಾಲದ ನಾಣ್ಯ ಹಾಗೂ ಅಂಚೆ ಚೀಟಿಗಳ ವಿಶೇಷ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.


ನಾಣ್ಯಗಳ ಸಂಗ್ರಹಕಾರರಾದ ಮೂಡಿಗೆರೆಯ ಎಂ. ಎಲ್. ಅಶೋಕ್ ಮಾತನಾಡಿ ನನ್ನ ಪ್ರಾಚೀನ ವಸ್ತುಗಳ ಸಂಗ್ರಹಕ್ಕೆ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಮಂಜೂಷಾ ವಸ್ತು ಸಂಗ್ರಹಾಲಯವೇ ಪ್ರೇರಣೆ. ಅವಕಾಶ ಮಾಡಿಕೊಟ್ಟ ಪೂಜ್ಯರಿಗೆ ಹಾಗೂ ಮಂಜೂಷಾದ ಸಿಬಂದಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಾಚೀನ ಭಾರತದಿಂದ ಆರಂಭಗೊಂಡು ಮೊನ್ನೆ ಮೊನ್ನೆಯಷ್ಟೇ ಬಿಡುಗಡೆಗೊಂಡ ನಾಣ್ಯಗಳವರೆಗೆ ಸಂಗ್ರಹಿಸಲಾದ 1000ಕ್ಕೂ ಹೆಚ್ಚಿನ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ವಿವಿಧ ರಾಜ-ಮಹಾರಾಜರ ಕಾಲ, ಸ್ವಾತಂತ್ಯ್ರ ಪೂರ್ವ, ಸ್ವತಂತ್ರ ಭಾರತದ ಕಾಲದಿಂದ ಹಿಡಿದು ವಿಶೇಷ ಸಂದರ್ಭಗಳಲ್ಲಿ ಸರಕಾರವು ಬಿಡುಗಡೆಗೊಳಿಸಿದ ನಾಣ್ಯಗಳು, ಅಂಚೆ ಚೀಟಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಚಿನ್ನ, ಬೆಳ್ಳಿ, ತಾಮ್ರ ಹೀಗೆ ಹಲವು ರೀತಿಯ ನಾಣ್ಯಗಳನ್ನು ನೋಡಬಹುದು ಎಂದು ಹೇಳಿದರು.


ಧರ್ಮಸ್ಥಳದಲ್ಲಿರುವ ಮಂಜೂಷಾ ಮ್ಯೂಸಿಯಂನಲ್ಲಿ ವೀರೇಂದ್ರ ಹೆಗ್ಗಡೆಯವರ ಸಂಗ್ರಹಗಳ ಪ್ರದರ್ಶನದ ಜೊತೆಗೆ ವಿವಿಧ ಚಟುವಟಿಕೆ, ಕಾರ್ಯಾಗಾರಗಳ ಮೂಲಕ ಶಾಲಾ ಮಕ್ಕಳಿಗೆ, ಆಸಕ್ತರಿಗೆ ಪುರಾತನ ವಸ್ತುಗಳ ಮಾಹಿತಿ ಒದಗಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಸ್ತು ಸಂಗ್ರಹಾಲಯವು  ಜ್ಞಾನ ಹೆಚ್ಚಿಸುವುದರ ಜೊತೆಗೆ ಪ್ರಾಚೀನ ವಸ್ತುಗಳ ಬಗ್ಗೆ ಅರಿವು ಮೂಡಿಸಿ, ಇನ್ನಷ್ಟು ಆಸಕ್ತಿ, ಕುತೂಹಲ ಹೆಚ್ಚಲು ಪ್ರೇರಣೆಯಾಗಿವೆ ಎಂದು  ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ ಹೇಳಿದರು.


ಈ ಸಂದರ್ಭದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯದ ಉಪ ನಿರ್ದೇಶಕ ರಿತೇಶ್ ಶರ್ಮಾ ಎಸ್‌ಡಿಎಂ ಸಂಸ್ಕೃತಿ ಮತ್ತು ಸಂಶೋಧನಾ ಪ್ರತಿಷ್ಠಾನದ ಡಾ. ಪವನ್ ಕುಮಾರ್ ಹಾಗೂ ಇತರ ಸಿಬಂದಿಗಳು ಉಪಸ್ಥಿತರಿದ್ದರು.

Related posts

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!