23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ ದವಳ ಕಾಲೇಜ್ ಮೂಡಬಿದಿರಿ ಇವರು ವಹಿಸಿ ಮಾತನಾಡಿ ಎನ್ಎಸ್ಎಸ್ ಒಬ್ಬ ವ್ಯಕ್ತಿಯ ಪರಿಪೂರ್ಣತೆಗೆ ಹೇಗೆ ಸಾಧ್ಯವಾಗುತ್ತದೆ ಎನ್ನುವಂತದ್ದನ್ನು ವಿವರಿಸಿದರು.

ಸಮಾರಂಭದ ಸಮರೋಪ ಭಾಷಣವನ್ನು ಕೆ. ಹೇಮರಾಜ್ ಸಂಚಾಲಕರು ಡಿ ಜೆ ವಿ ಸಂಘ ಮೂಡಬಿದ್ರೆ ನಿರ್ವಹಿಸಿಮಾತನಾಡಿ ಎನ್ಎಸ್ಎಸ್ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಯಶಸ್ವಿಯಾಗಲು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವುದರಿಂದ ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಮುಖ್ಯೋಪಾಧ್ಯಾಯರು ಶ್ರೀಮತಿ ಮಾಸರ್ಲಿನ್ ಲೀನಾ ಪಿರೇರಾ , ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಕುಂಭಶ್ರೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಿರೀಶ್ ಕೆ.ಎಚ್ , ಎಚ್ ಮೊಹಮ್ಮದ್ ಪತ್ರಕರ್ತರು, ಶ್ರೀ ಶ್ರೀಧರ ಆಚಾರ್ಯ ಉದ್ಯಮಿಗಳು ಖಂಡಿಗ, ಅರವಿಂದ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಯಶೋಧ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ವಂದಿಸಿದರು. ಕುಮಾರಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನಾಯಕರಾದ ಕುಮಾರಿ ಮೇಘ ಕುಮಾರಿ ದಿವ್ಯ , ಸುಜನ್, ಸಾನ್ವಿತ್ ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya
error: Content is protected !!