23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ ದವಳ ಕಾಲೇಜ್ ಮೂಡಬಿದಿರಿ ಇವರು ವಹಿಸಿ ಮಾತನಾಡಿ ಎನ್ಎಸ್ಎಸ್ ಒಬ್ಬ ವ್ಯಕ್ತಿಯ ಪರಿಪೂರ್ಣತೆಗೆ ಹೇಗೆ ಸಾಧ್ಯವಾಗುತ್ತದೆ ಎನ್ನುವಂತದ್ದನ್ನು ವಿವರಿಸಿದರು.

ಸಮಾರಂಭದ ಸಮರೋಪ ಭಾಷಣವನ್ನು ಕೆ. ಹೇಮರಾಜ್ ಸಂಚಾಲಕರು ಡಿ ಜೆ ವಿ ಸಂಘ ಮೂಡಬಿದ್ರೆ ನಿರ್ವಹಿಸಿಮಾತನಾಡಿ ಎನ್ಎಸ್ಎಸ್ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಯಶಸ್ವಿಯಾಗಲು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವುದರಿಂದ ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಮುಖ್ಯೋಪಾಧ್ಯಾಯರು ಶ್ರೀಮತಿ ಮಾಸರ್ಲಿನ್ ಲೀನಾ ಪಿರೇರಾ , ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಕುಂಭಶ್ರೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಿರೀಶ್ ಕೆ.ಎಚ್ , ಎಚ್ ಮೊಹಮ್ಮದ್ ಪತ್ರಕರ್ತರು, ಶ್ರೀ ಶ್ರೀಧರ ಆಚಾರ್ಯ ಉದ್ಯಮಿಗಳು ಖಂಡಿಗ, ಅರವಿಂದ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಯಶೋಧ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ವಂದಿಸಿದರು. ಕುಮಾರಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನಾಯಕರಾದ ಕುಮಾರಿ ಮೇಘ ಕುಮಾರಿ ದಿವ್ಯ , ಸುಜನ್, ಸಾನ್ವಿತ್ ಉಪಸ್ಥಿತರಿದ್ದರು.

Related posts

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!