ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭವು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾರ್ಶ್ವನಾಥ ಅಜ್ರಿ ಪ್ರಾಂಶುಪಾಲರು ಶ್ರೀ ದವಳ ಕಾಲೇಜ್ ಮೂಡಬಿದಿರಿ ಇವರು ವಹಿಸಿ ಮಾತನಾಡಿ ಎನ್ಎಸ್ಎಸ್ ಒಬ್ಬ ವ್ಯಕ್ತಿಯ ಪರಿಪೂರ್ಣತೆಗೆ ಹೇಗೆ ಸಾಧ್ಯವಾಗುತ್ತದೆ ಎನ್ನುವಂತದ್ದನ್ನು ವಿವರಿಸಿದರು.

ಸಮಾರಂಭದ ಸಮರೋಪ ಭಾಷಣವನ್ನು ಕೆ. ಹೇಮರಾಜ್ ಸಂಚಾಲಕರು ಡಿ ಜೆ ವಿ ಸಂಘ ಮೂಡಬಿದ್ರೆ ನಿರ್ವಹಿಸಿಮಾತನಾಡಿ ಎನ್ಎಸ್ಎಸ್ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಯಶಸ್ವಿಯಾಗಲು ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವುದರಿಂದ ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಸಂತ ಜೂಡರ ಹಿರಿಯ ಪ್ರಾಥಮಿಕ ಶಾಲೆ ಕರಿಮಣೇಲು ಮುಖ್ಯೋಪಾಧ್ಯಾಯರು ಶ್ರೀಮತಿ ಮಾಸರ್ಲಿನ್ ಲೀನಾ ಪಿರೇರಾ , ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಕುಂಭಶ್ರೀ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗಿರೀಶ್ ಕೆ.ಎಚ್ , ಎಚ್ ಮೊಹಮ್ಮದ್ ಪತ್ರಕರ್ತರು, ಶ್ರೀ ಶ್ರೀಧರ ಆಚಾರ್ಯ ಉದ್ಯಮಿಗಳು ಖಂಡಿಗ, ಅರವಿಂದ ಶೆಟ್ಟಿ ಖಂಡಿಗ ಉಪಸ್ಥಿತರಿದ್ದರು.

ಸಹಾಯಕ ಪ್ರಾಧ್ಯಾಪಕರು ಶ್ರೀಮತಿ ಯಶೋಧ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷ್ ಶೆಟ್ಟಿ ವಂದಿಸಿದರು. ಕುಮಾರಿ ದೀಪಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು . ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ನಾಯಕರಾದ ಕುಮಾರಿ ಮೇಘ ಕುಮಾರಿ ದಿವ್ಯ , ಸುಜನ್, ಸಾನ್ವಿತ್ ಉಪಸ್ಥಿತರಿದ್ದರು.

Related posts

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya
error: Content is protected !!