23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.17ರಂದು ಗ್ರಾ.ಪಂ. ಪ್ರಭಾರ ಅಧ್ಯಕ್ಷ ಪೂರ್ಣಾಕ್ಷ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕ ಧೀರಜ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಇಲಾಖಾಧಿಕಾರಿಗಳು ಗೈರು ಗ್ರಾಮಸ್ಥರು ಹೈರಾಣ:
ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಬಾಕಿ ಉಳಿದ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಗೆ ಬರಬೇಕು ಅಲ್ಲಿಯವರೆಗೆ ಸಭೆ ನಡೆಯಲು ಬಿಡುವುದಿಲ್ಲ ಎಂದು ಸಭೆಯ ಪ್ರಾರಂಭದಲ್ಲಿ ಗ್ರಾಮಸ್ಥರು ಪಟ್ಟು ಹಿಡಿದರು. ಅಧಿಕಾರಿಗಳು ಕೂಡ ಕಾನೂನು ನನ್ನು ಪಾಲಿಸಬೇಕು. ಪುದುವೆಟ್ಟು ಗ್ರಾಮವನ್ನು ಅಧಿಕಾರಿಗಳು ಪದೇ ಪದೇ ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆ. ಪ್ರತಿ ಬಾರಿ ಕೊರಂ ಕೊರತೆ ಇರುತಿತ್ತು ಆದರೆ ಇಂದು ಅಧಿಕಾರಿಗಳು ಕೂಡ ಗೈರು ಆಗಿದ್ದಾರೆ ಅಷ್ಟೇ ಅಲ್ಲದೆ ಗ್ರಾಮಸ್ಥರು ಕೂಡ ಕ್ಷೀಣ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರಾಮಸ್ಥರ್ರ್ರೋವರು ತಿಳಿಸಿದರು.

ಸಮಸ್ಯೆಯನ್ನು ಯಾರ ಬಳಿ ಕೇಳುವುದು:
ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಇರುವ ಕಾರಣ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಪಿಡಿಓ ರವಿ ಬಸಪ್ಪ ಹೇಳಿದರು. ಅವರು ಸಭೆಗೆ ಹಾಜರಾಗಲು ಅನಾನುಕೂಲವಾಗುತ್ತದೆ ಎಂದು ತಹಶೀಲ್ದಾರ್ ಗ್ರಾ.ಪಂ.ಅಧ್ಯಕ್ಷರಿಗೆ ತಿಳಿಸಿದ್ದಾರೆ ಎಂದು ಪಿಡಿಓ ತಿಳಿಸಿದರು. ಸರ್ವೇ ನಂಬ್ರ 267ರ ಮಾಹಿತಿ ಬೇಕು ಈ ಬಗ್ಗೆ ಯಾರು ತಿಳಿಸುತ್ತಾರೆ ಎಂದು ಗ್ರಾಮಸ್ಥ ಕೇಳಿದರು. ಈ ಬಗ್ಗೆ ನೀವು ಲಿಖಿತ ರೂಪದಲ್ಲಿ ನೀಡಿ ಅಥವಾ ನಿಮ್ಮ ಪ್ರಶ್ನೆಯನ್ನು ತಿಳಿಸಿ ಪಿಡಿಓ ಸಂಬಂಧಪಟ್ಟವರಿಗೆ ತಿಳಿಸುತ್ತಾರೆ ಎಂದು ಮಾರ್ಗದರ್ಶಿ ಅಧಿಕಾರಿ ಧೀರಜ್ ಹೇಳಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗುತ್ತಾರೆ ಎಂದು ಮಾಹಿತಿ ನೀಡಿದರು. ಪೊಲೀಸ್ , ಪಶು ಸಂಗೋಪನಾ, ಮೆಸ್ಕಾಂ, ಆರೋಗ್ಯ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸದಸ್ಯರಾದ ಭಾಸ್ಕರ, ಯಶವಂತ ಗೌಡ ಡೆಚ್ಚಾರು , ಅಪ್ಪಿ, ರೇಣುಕಾ, ವನಿತಾ ಹಾಗೂ ಇಂದಿರಾ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಓ ರವಿ ಬಸಪ್ಪ ಸ್ವಾಗತಿಸಿದರು.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಅಲೋಶಿಯಸ್ ಎಸ್. ಲೋಬೊ; ಉಪಾಧ್ಯಕ್ಷರಾಗಿ ಶ್ರೀನಿವಾಸ್ ಗೌಡ ಬೆಳಾಲು, ಕೋಶಾಧಿಕಾರಿಯಾಗಿ ಮುಮ್ತಾಜ್ ಬೇಗಂ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ನಾವೂರು ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!