July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಗ್ರಾಮ ಸಭೆ: ಕಂದಾಯ ಇಲಾಖೆಯ ಅಧಿಕಾರಿಗಳ ಗೈರು, ಗ್ರಾಮಸ್ಥರು ಅಕ್ರೋಶ

ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.17ರಂದು ಗ್ರಾ.ಪಂ. ಪ್ರಭಾರ ಅಧ್ಯಕ್ಷ ಪೂರ್ಣಾಕ್ಷ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕ ಧೀರಜ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಇಲಾಖಾಧಿಕಾರಿಗಳು ಗೈರು ಗ್ರಾಮಸ್ಥರು ಹೈರಾಣ:
ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಬಾಕಿ ಉಳಿದ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಗೆ ಬರಬೇಕು ಅಲ್ಲಿಯವರೆಗೆ ಸಭೆ ನಡೆಯಲು ಬಿಡುವುದಿಲ್ಲ ಎಂದು ಸಭೆಯ ಪ್ರಾರಂಭದಲ್ಲಿ ಗ್ರಾಮಸ್ಥರು ಪಟ್ಟು ಹಿಡಿದರು. ಅಧಿಕಾರಿಗಳು ಕೂಡ ಕಾನೂನು ನನ್ನು ಪಾಲಿಸಬೇಕು. ಪುದುವೆಟ್ಟು ಗ್ರಾಮವನ್ನು ಅಧಿಕಾರಿಗಳು ಪದೇ ಪದೇ ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆ. ಪ್ರತಿ ಬಾರಿ ಕೊರಂ ಕೊರತೆ ಇರುತಿತ್ತು ಆದರೆ ಇಂದು ಅಧಿಕಾರಿಗಳು ಕೂಡ ಗೈರು ಆಗಿದ್ದಾರೆ ಅಷ್ಟೇ ಅಲ್ಲದೆ ಗ್ರಾಮಸ್ಥರು ಕೂಡ ಕ್ಷೀಣ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಗ್ರಾಮಸ್ಥರ್ರ್ರೋವರು ತಿಳಿಸಿದರು.

ಸಮಸ್ಯೆಯನ್ನು ಯಾರ ಬಳಿ ಕೇಳುವುದು:
ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಇರುವ ಕಾರಣ ಸಭೆಗೆ ಗೈರು ಹಾಜರಾಗಿದ್ದಾರೆ ಎಂದು ಪಿಡಿಓ ರವಿ ಬಸಪ್ಪ ಹೇಳಿದರು. ಅವರು ಸಭೆಗೆ ಹಾಜರಾಗಲು ಅನಾನುಕೂಲವಾಗುತ್ತದೆ ಎಂದು ತಹಶೀಲ್ದಾರ್ ಗ್ರಾ.ಪಂ.ಅಧ್ಯಕ್ಷರಿಗೆ ತಿಳಿಸಿದ್ದಾರೆ ಎಂದು ಪಿಡಿಓ ತಿಳಿಸಿದರು. ಸರ್ವೇ ನಂಬ್ರ 267ರ ಮಾಹಿತಿ ಬೇಕು ಈ ಬಗ್ಗೆ ಯಾರು ತಿಳಿಸುತ್ತಾರೆ ಎಂದು ಗ್ರಾಮಸ್ಥ ಕೇಳಿದರು. ಈ ಬಗ್ಗೆ ನೀವು ಲಿಖಿತ ರೂಪದಲ್ಲಿ ನೀಡಿ ಅಥವಾ ನಿಮ್ಮ ಪ್ರಶ್ನೆಯನ್ನು ತಿಳಿಸಿ ಪಿಡಿಓ ಸಂಬಂಧಪಟ್ಟವರಿಗೆ ತಿಳಿಸುತ್ತಾರೆ ಎಂದು ಮಾರ್ಗದರ್ಶಿ ಅಧಿಕಾರಿ ಧೀರಜ್ ಹೇಳಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಗೆ ಹಾಜರಾಗುತ್ತಾರೆ ಎಂದು ಮಾಹಿತಿ ನೀಡಿದರು. ಪೊಲೀಸ್ , ಪಶು ಸಂಗೋಪನಾ, ಮೆಸ್ಕಾಂ, ಆರೋಗ್ಯ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸದಸ್ಯರಾದ ಭಾಸ್ಕರ, ಯಶವಂತ ಗೌಡ ಡೆಚ್ಚಾರು , ಅಪ್ಪಿ, ರೇಣುಕಾ, ವನಿತಾ ಹಾಗೂ ಇಂದಿರಾ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಿಡಿಓ ರವಿ ಬಸಪ್ಪ ಸ್ವಾಗತಿಸಿದರು.

Related posts

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!