25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya
error: Content is protected !!