ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿ ಬ್ರಾಂಚ್ ಜನತೆಗೆ ಒಂದು ವರ್ಷದಲ್ಲಿ ರೂ. 55 ಕೋಟಿ ಆರ್ಥಿಕ ಭದ್ರತೆ ನೀಡಿದೆ ಇದು ಬ್ರಾಂಚ್ ವ್ಯಾಪ್ತಿಯ ಸಾಧನೆಯಲ್ಲಿ ದೇಶದಲ್ಲಿ 4 ನೇ ಸ್ಥಾನ ರಾಜ್ಯದಲ್ಲಿ 2 ನೇ ಸ್ಥಾನ ಪಡೆದು 2ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಮುಂದಿನ ವರ್ಷದಲ್ಲಿ ಬೆಳ್ತಂಗಡಿ ಕೋಟಕ್ ಲೈಫ್ ದೇಶದಲ್ಲೇ ಅತ್ಯುನ್ನತ ಸ್ಥಾನದಲ್ಲಿ ಗುರುತಿಸುವಂತಾಗಲಿ ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೋಟಕ್ ಲೈಫ್ ಮಂಗಳೂರು ಚೀಫ್ ಎಜೇಂನ್ಸಿ ಪಾಲುದಾರರಾದ ಪದ್ಮ ಬೆಳಚಡ ಹಾಗೂ ಸೀನಿಯರ್ ಎಜೇಂನ್ಸಿ ಪಾಲುದಾರ ಚಂದ್ರಶೇಖರ್ ರವರುಗಳು ಮಾತನಾಡಿ ಮುಂದಿನ ದಿನಗಳಲ್ಲೂ ಜನತೆಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಬೆಳ್ತಂಗಡಿ ಬ್ರಾಂಚ್ ಮುಂಚೂಣಿಯಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ, ಕಡಬ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಗಳು ಪ್ರಜ್ವಲ್ ಅಡೂರ್, ದುರ್ಗಾಪ್ರಸಾದ್, ರವಿ ಆಚಾರ್ಯ, ಚೀಫ್ ಎಜೇಂನ್ಸಿ ಪಾಲುದಾರರಾದ ದಿನಕರ್ ಕೆ., ಗಿರೀಶ್ ಬಿ. ಜಿ., ಸೀನಿಯರ್ ಎಜೇಂನ್ಸಿ ಪಾಲದಾರರಾದ ಅನಿತಾ ಪ್ರದೀಪ್ ಶೆಟ್ಟಿ, ಯೋಗೀಶ್ ಆಳಂಬಿಲ ಕೊಕ್ಕಡ, ಬೆಳ್ತಂಗಡಿ, ಕಡಬ., ಪುತ್ತೂರು, ಮಡಿಕೇರಿ ಬ್ರಾಂಚ್ ಏಜೇಂನ್ಸಿ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya
error: Content is protected !!