23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ತೀರಾ ಹದಗೆಟ್ಟು ಹೋಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.

ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ-ಗುಂಡಿಗಳು ನಿರ್ಮಾಣವಾಗಿ ಪ್ರತಿ ನಿತ್ಯ ಪ್ರಯಾಣಿಸುವ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತಿಚೇಗೆ ಅಲ್ಲಲ್ಲಿ ಕಾಟಾಚಾರಕ್ಕೆ ತೇಪೆ ಕಾರ್ಯ ನಡೆದಿದ್ದು, ಗುಂಡಿಗಳಿಗೆ ಕೇವಲ ಜಲ್ಲಿ ಕಲ್ಲು ಹಾಕಿದ್ದು ಅದು ಎದ್ದು ಹೋಗಿ ರಸ್ತೆಯಲ್ಲಿ ಹರಡಿಕೊಂಡಿದೆ. ಕೆಲವು ಕಡೆಗಳಲ್ಲಿ ನಾಗರಿಕರೇ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ಸಂಚಾರಕ್ಕೆ ತಕ್ಕ ಮಟ್ಟಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ: ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಮನವಿ ಮೇರೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯಿಂದ
ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದರ ಶಿಲಾನ್ಯಾಸ ಕಾರ್ಯಕ್ರಮ ನಾಳೆ ಫೆ.18ರಂದು ಪೂರ್ವಾಹ್ನ:9.30 ಕ್ಕೆ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ನಡೆಯಲಿದೆ. ಶಿಲಾನ್ಯಶವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ನೆರವೇರಿಸಲಿದ್ದು, ತಾಲೂಕಿನ ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮ ಪಂಚಾಯತುಗಳು ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಂಘ-ಸಂಸ್ಥೆಯವರು, ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ.

Related posts

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya
error: Content is protected !!