July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

ಅಳದಂಗಡಿ: ಗ್ರಾಮ ಸಭೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸದೆ ಇರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದ ಘಟನೆ ಅಳದಂಗಡಿ ಗ್ರಾಮ ಸಭೆಯಲ್ಲಿ ನಡೆಯಿತು.


ಅಳದಂಗಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.18 ರಂದು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಅಧಿಕಾರಿಗಳು ನಮ್ಮನ್ನು ಅಸಡ್ಡೆ ಭಾವದಿಂದ ತೋರುತ್ತಿದ್ದಾರೆ. ಸಭೆಯಲ್ಲಿ ಇಲಾಖೆ ಮಾಹಿತಿ ಕೇಳಲು ಅಧಿಕಾರಿಗಳು ಇಲ್ಲ. ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಎಲ್ಲಿ. ಇಲಾಖೆ ಹೋದರೆ ಅಲ್ಲಿ ಅಧಿಕಾರಿಗಳು ಸಿಗುವುದಿಲ್ಲ. ಕೃಷಿ ಭೂಮಿಯಲ್ಲಿ ರೋಗಗಳು ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಕೇಳಲು ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿಯೇ ಇಲ್ಲ ಎಂದು ಗ್ರಾಮಸ್ಥರು ತಮ್ಮ ನೋವುನ್ನು ತೋಡಿಕೊಂಡರು. ಎಲ್ಲಾ ಇಲಾಖೆಗಳಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಇಲ್ಲ. ಸಮಸ್ಯೆಯನ್ನು ತಿಳಿಸಿ ಸಂಬಂಧ ಪಟ್ಟ ಇಲಾಖೆಗಳಿಗೆ ಪತ್ರ ಬರೆದು ಕಳುಹಿಸಲಾಗುವುದು ಎಂದು ಮಾರ್ಗದರ್ಶಿ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.

ಉಪಾಧ್ಯಕ್ಷೆ ಶಾಲಿನಿ, ಸದಸ್ಯರಾದ ಸೌಮ್ಯ, ಪ್ರಶಾಂತ್ ವೇಗಸ್, ರೂಪಾಶ್ರೀ, ಗೀತಾ, ಲಲಿತಾ, ಅಬ್ದುಲ್ ಖಾದರ್, ರವಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ಹರೀಶ ಹಾಗೂ ಪ್ರವೀಣ, ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಪೂರ್ಣಿಮಾ ಸ್ವಾಗತಿಸಿದರು.

Related posts

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya
error: Content is protected !!