25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ಕಲ್ಲೇರಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಫೆ 17 ರಂದು ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ತರಬೇತಿ ಉದ್ಘಾಟಿಸಿದರು. ಭಾಗವಹಿಸಿದ ಮಹಿಳೆಯರಿಗೆ ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಅದೇ ರೀತಿ ತರಬೇತಿ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗೇರುಕಟ್ಟೆ ಟೈಲರ್ ಒಕ್ಕೂಟದ ಅಧ್ಯಕ್ಷ ಉಮೇಶ್ ಶೆಟ್ಟಿ ಇವರು ಕಸೂತಿ ಕೆಲಸದ ಮಹತ್ವ ವಿವರಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ ಮಹಿಳೆಯರಿಗೆ ಶುಭ ಕೋರಿದರು. ತರಬೇತುದಾರರಾದ ಶುಭಲತಾ , ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.

ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಒಂದು ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!