Uncategorized

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಬೆಳ್ತಂಗಡಿ: ಹಾಡುಹಗಲೇ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ನಡೆದಿದೆ.
ಮಧ್ಯಾಹ್ನ 11 ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ.
ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಹಾಗೂ ಸುಮಾರು 3000 ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2,000 ರೂ. ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ತಿಳಿಸಿದ್ದಾರೆ.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!