24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

ಅಳದಂಗಡಿ: ಗ್ರಾಮ ಸಭೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸದೆ ಇರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದ ಘಟನೆ ಅಳದಂಗಡಿ ಗ್ರಾಮ ಸಭೆಯಲ್ಲಿ ನಡೆಯಿತು.


ಅಳದಂಗಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಫೆ.18 ರಂದು ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು.

ಅಧಿಕಾರಿಗಳು ನಮ್ಮನ್ನು ಅಸಡ್ಡೆ ಭಾವದಿಂದ ತೋರುತ್ತಿದ್ದಾರೆ. ಸಭೆಯಲ್ಲಿ ಇಲಾಖೆ ಮಾಹಿತಿ ಕೇಳಲು ಅಧಿಕಾರಿಗಳು ಇಲ್ಲ. ನಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಎಲ್ಲಿ. ಇಲಾಖೆ ಹೋದರೆ ಅಲ್ಲಿ ಅಧಿಕಾರಿಗಳು ಸಿಗುವುದಿಲ್ಲ. ಕೃಷಿ ಭೂಮಿಯಲ್ಲಿ ರೋಗಗಳು ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಕೇಳಲು ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿಯೇ ಇಲ್ಲ ಎಂದು ಗ್ರಾಮಸ್ಥರು ತಮ್ಮ ನೋವುನ್ನು ತೋಡಿಕೊಂಡರು. ಎಲ್ಲಾ ಇಲಾಖೆಗಳಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಇಲ್ಲ. ಸಮಸ್ಯೆಯನ್ನು ತಿಳಿಸಿ ಸಂಬಂಧ ಪಟ್ಟ ಇಲಾಖೆಗಳಿಗೆ ಪತ್ರ ಬರೆದು ಕಳುಹಿಸಲಾಗುವುದು ಎಂದು ಮಾರ್ಗದರ್ಶಿ ಅಧಿಕಾರಿ ಚಂದ್ರಶೇಖರ್ ತಿಳಿಸಿದರು.

ಉಪಾಧ್ಯಕ್ಷೆ ಶಾಲಿನಿ, ಸದಸ್ಯರಾದ ಸೌಮ್ಯ, ಪ್ರಶಾಂತ್ ವೇಗಸ್, ರೂಪಾಶ್ರೀ, ಗೀತಾ, ಲಲಿತಾ, ಅಬ್ದುಲ್ ಖಾದರ್, ರವಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ಹರೀಶ ಹಾಗೂ ಪ್ರವೀಣ, ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು , ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಪೂರ್ಣಿಮಾ ಸ್ವಾಗತಿಸಿದರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya
error: Content is protected !!