30.7 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

ಬೆಳ್ತಂಗಡಿ: ಸಂಪಾಜೆ ಯಕ್ಷೋತ್ಸವದ ಸಂಘಟನೆ, ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದ ಕಲಾವಿದ,ವಿದ್ವಾಂಸರಿಗೆ ಗೌರವ, ತಾಳಮದ್ದಳೆಗಳ ಆಯೋಜನೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಶ್ರೀ ಎಡನೀರು ಮಠ ಮತ್ತು ಕೈರಂಗಳ ಕ್ಷೇತ್ರದಲ್ಲಿ ವಿಶೇಷ ಯಕ್ಷಗಾನ ಕಾರ್ಯಕ್ರಮಗಳು, ಸದಭಿರುಚಿಯ ಯಕ್ಷಗಾನ ಪ್ರದರ್ಶನ ನೀಡುವ ಮೇಳದ ಯಜಮಾನರಾಗಿ , ಕಲಾವಿದರ ಕಾಮಧೇನುವೆಂದು ಯಕ್ಷಗಾನ ವಲಯದಲ್ಲಿ ಪ್ರಸಿದ್ಧರಾದವರು ಟಿ. ಶ್ಯಾಮ್ ಭಟ್.

ಪ್ರಸ್ತುತ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ನಿವೃತ್ತ ಐಎಎಸ್ ಅಧಿಕಾರಿಯೂ ಆಗಿರುವ ಟಿ. ಶ್ಯಾಮ್ ಭಟ್ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಯಕ್ಷ ಭಾರತಿ ಬೆಳ್ತಂಗಡಿ ಸಂಸ್ಥೆಯ ದಶಮಾನೋತ್ಸವದ ಗೌರವ ಸನ್ಮಾನವನ್ನು ಪ್ರದಾನ ಮಾಡಲಾಯಿತು.

ಗೌರವ ಸ್ವೀಕರಿಸಿದ ಶ್ಯಾಮ್ ಭಟ್ ಅವರು ಯಕ್ಷ ಭಾರತಿ ಬೆಳ್ತಂಗಡಿ ನಡೆಸುತ್ತಿರುವ ಯಕ್ಷಗಾನ ಚಟುವಟಿಕೆಗಳು, ಆರೋಗ್ಯ ಸೇವೆ, ಸಂಸ್ಕಾರ ಶಿಕ್ಷಣದಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲವೇ ಅನ್ಯ ಪ್ರದೇಶಗಳಲ್ಲಿ ಕೂಡ ಮೆಚ್ಚುಗೆಯಿದೆಯೆಂದು ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದರು.

ಸಂಪಾಜೆಯ ಅವರ ನಿವಾಸದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಉಜಿರೆ,ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಟ್ರಸ್ಟಿ ಹರೀಶ್ ರಾವ್ ಮುಂಡ್ರುಪ್ಪಾಡಿ , ಸಂಚಾಲಕ ಮಹೇಶ್ ಕನ್ಯಾಡಿ, ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳೆಂಜ ಮತ್ತು ಮರಳಿ ಕೃಷ್ಣ ಆಚಾರ್ ಉಪಸ್ಥಿತರಿದ್ದರು.

Related posts

ಪಟ್ರಮೆ : ರೂ. 40 ಲಕ್ಷ ವೆಚ್ಚದ ಉಳಿಯ ಬೀಡಿನ ಕಾಲು ಸೇತುವೆಗೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya
error: Content is protected !!