24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ಕಲ್ಲೇರಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಫೆ 17 ರಂದು ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ತರಬೇತಿ ಉದ್ಘಾಟಿಸಿದರು. ಭಾಗವಹಿಸಿದ ಮಹಿಳೆಯರಿಗೆ ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಅದೇ ರೀತಿ ತರಬೇತಿ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗೇರುಕಟ್ಟೆ ಟೈಲರ್ ಒಕ್ಕೂಟದ ಅಧ್ಯಕ್ಷ ಉಮೇಶ್ ಶೆಟ್ಟಿ ಇವರು ಕಸೂತಿ ಕೆಲಸದ ಮಹತ್ವ ವಿವರಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ ಮಹಿಳೆಯರಿಗೆ ಶುಭ ಕೋರಿದರು. ತರಬೇತುದಾರರಾದ ಶುಭಲತಾ , ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.

ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಒಂದು ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!