23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ಕಲ್ಲೇರಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಫೆ 17 ರಂದು ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ತರಬೇತಿ ಉದ್ಘಾಟಿಸಿದರು. ಭಾಗವಹಿಸಿದ ಮಹಿಳೆಯರಿಗೆ ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಅದೇ ರೀತಿ ತರಬೇತಿ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗೇರುಕಟ್ಟೆ ಟೈಲರ್ ಒಕ್ಕೂಟದ ಅಧ್ಯಕ್ಷ ಉಮೇಶ್ ಶೆಟ್ಟಿ ಇವರು ಕಸೂತಿ ಕೆಲಸದ ಮಹತ್ವ ವಿವರಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ ಮಹಿಳೆಯರಿಗೆ ಶುಭ ಕೋರಿದರು. ತರಬೇತುದಾರರಾದ ಶುಭಲತಾ , ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.

ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಒಂದು ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!