29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಯ ಸೇವೆ ಸಲ್ಲಿಸುವ ಉದ್ದೇಶದಿಂದ ಬೆಳ್ತಂಗಡಿಯಲ್ಲಿ ಹುಟ್ಟಿಕೊಂಡ ಸಂಸ್ಥೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ. ಸಾಂಸ್ಕೃತಿಕ ಚಿಂತಕ ಸಂಪತ್ ಬಿ. ಸುವರ್ಣ ಅವರ ಸಾರಥ್ಯದ ಈ ಪ್ರತಿಷ್ಠಾನವು 15 ವರ್ಷಗಳಿಂದ ನಿರಂತರವಾಗಿ ಕಲೆ-ಸಂಸ್ಕೃತಿಗೆ ಸಂಬಂಧಿಸಿದ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನ ಮಾನಸದಲ್ಲಿ ಸ್ಥಾನ ಪಡೆದಿದೆ.


ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರ ರಥೋತ್ಸವದ ಪ್ರಯುಕ್ತ ಪ್ರತಿಷ್ಠಾನದ 15ನೇ ವರ್ಷದ ಸಾಂಸ್ಕೃತಿಕ ವೈಭವವು ಫೆ.19 ರಂದು ಬೆಳ್ತಂಗಡಿ ಸುವರ್ಣ ಆರ್ಕೇಡ್‌ನ ಮುಂಭಾಗ ತೆರೆದ ರಂಗಮಂದಿರದಲ್ಲಿ ನಡೆಯಲಿದೆ. ಚೈತನ್ಯ ಕಲಾವಿದರು ಬೈಲೂರು ಅಭಿನಯಿಸುವ ‘ಅಷ್ಟೆಮಿ’ ತುಳು ಸಾಮಾಜಿಕ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ. ಶಿಲಾ ಶಿಲ್ಪಿ ಜಯಚಂದ್ರ ಆಚಾರ್ಯ ನಾಳ, ಕಿರುತೆರೆ ನಿರ್ದೇಶಕ ಸುಭಾಶ್ ಅರ್ವ, ಯಕ್ಷಗಾನ ಕಲಾವಿದ ಮನೋಜ್ ಕುಮಾರ್ ವೇಣೂರು ಇವರಿಗೆ ಸುವರ್ಣ ರಂಗ ಸಮ್ಮಾನ್-2025 ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಬಳಿಕ ಯಕ್ಷ- ಗಾನ- ವೈಭವ ನಡೆಯಲಿದೆ.


ಕಲಾವಿದರನ್ನು ಕಿರುತೆರೆಗೆ, ಬೆಳ್ಳಿತೆರೆಗೆ ಪರಿಚಯಿಸಿದ ಶ್ರೇಯಸ್ಸು 2011ರಲ್ಲಿ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಂದ ಉದ್ಘಾಟನೆಗೊಂಡ ಈ ಪ್ರತಿಷ್ಠಾನ ನಿರಂತರವಾಗಿ ಕಲಾರಾಧನೆಯಲ್ಲಿ ತೊಡಗಿಸಿಕೊಂಡಿದೆ. ಸಾಂಸ್ಕೃತಿಕ ಚಟುವಟಿಕೆ ವಿರಳ ಇರುವ ಬೆಳ್ತಂಗಡಿ ಪರಿಸರದಲ್ಲಿ ಕಲಾಪ್ರೇಮಿಗಳ ಮನ ತಣಿಸುತ್ತಾ ಬರುತ್ತಿದೆ. ವಿಭಿನ್ನ ಮತ್ತು ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಮನ ಸೆಳೆದಿರುವ ಸಂಪತ್ ಬಿ ಸುವರ್ಣರವರು ಈ ತನಕ ನೂರಾರು ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಹಲವು ಕಲಾವಿದರನ್ನು ಕಿರುತೆರೆಗೆ, ಬೆಳ್ಳಿತೆರೆಗೆ ಪರಿಚಯಿಸಿದ ಶ್ರೇಯಸ್ಸು ಈ ಸಂಸ್ಥೆಗೆ ಸಲ್ಲುತ್ತದೆ.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!