September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ನೀಡಿದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು 12 ಕಿಲೋಮೀಟರ್ ರಸ್ತೆಯು ತೀರ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ.ಮತ್ತು ಈ ರಸ್ತೆಯು ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳನ್ನು ಸಂಪರ್ಕಿಸುವ ರಸ್ತೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್, ಕೆ. ಕೆ ಸಾಹುಲ್ ಅಮೀದ್, ಜಯ ವಿಕ್ರಂ, ಇಸುಬು ಇಲಂತಿಲ, ಬಾಲಕೃಷ್ಣ ಶೆಟ್ಟಿ, ಅಯೂಬ್ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!