23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

ಕಲ್ಲೇರಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಒಂದು ತಿಂಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಫೆ 17 ರಂದು ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ರೈ ತರಬೇತಿ ಉದ್ಘಾಟಿಸಿದರು. ಭಾಗವಹಿಸಿದ ಮಹಿಳೆಯರಿಗೆ ಬಹಳ ನಾಜುಕಾದ ತರಬೇತಿಯನ್ನು ಉತ್ತಮ ಮಟ್ಟದಲ್ಲಿ ಪಡೆದು ಮಹಿಳೆಯರು ಮುಂದೆ ಹೆಚ್ಚಿನ ಕೌಶಲ್ಯ ಪಡೆಯಲು ಪ್ರೇರೇಪಿಸಿದರು. ಅದೇ ರೀತಿ ತರಬೇತಿ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಗೇರುಕಟ್ಟೆ ಟೈಲರ್ ಒಕ್ಕೂಟದ ಅಧ್ಯಕ್ಷ ಉಮೇಶ್ ಶೆಟ್ಟಿ ಇವರು ಕಸೂತಿ ಕೆಲಸದ ಮಹತ್ವ ವಿವರಿಸಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ ತರಬೇತಿಯ ನಿಯಮಗಳ ಬಗ್ಗೆ ವಿವರಿಸಿ ಮಹಿಳೆಯರಿಗೆ ಶುಭ ಕೋರಿದರು. ತರಬೇತುದಾರರಾದ ಶುಭಲತಾ , ಟೈಲರಿಂಗ್ ತರಬೇತುದಾರರಾದ ಮೀನಾಕ್ಷಿ ಉಪಸ್ಥಿತರಿದ್ದರು.

ಕಲ್ಲೇರಿ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಒಂದು ತಿಂಗಳ ತರಬೇತಿ ಪಡೆಯಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya
error: Content is protected !!