July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಬೆಳ್ತಂಗಡಿ: ಭಾರತದ ವೈವಿಧ್ಯಮಯ ವಿವಿಧ ಪಂಗಡಗಳಲ್ಲಿ ಕುಂಬಾರ ಸಮುದಾಯವು ಅಗ್ರಸ್ಥಾನದಲ್ಲಿದೆ. ಮೂಲತ: ಮಣ್ಣಿನ ಮಕ್ಕಳಾದ ಕುಂಬಾರರ ಬಗ್ಗೆ ನಮ್ಮ ಪುರಾತನ ಕಾವ್ಯಗಳಲ್ಲಿ ಅನೇಕ ಉಲ್ಲೇಖವಿದೆ. ಭಾರತೀಯ ಸಂಸ್ಕೃತಿಗೆ ಸಂಪ್ರದಾಯ ಆಚಾರ ವಿಚಾರಕ್ಕೆ ಕುಂಬಾರ ಸಮುದಾಯ ತನ್ನದೆ ಆದ ಅನೇಕ ಕೊಡುಗೆಗಳನ್ನು ನೀಡಿದೆ. ನಾಗರೀಕ ಸಮಾಜಕ್ಕೆ ಆಹಾರ ಬೇಯಿಸಿ ತಿನ್ನಲು ಬೇಕಾಗುವ ಮಡಿಕೆ-ಕುಡಿಕೆಗಳನ್ನು ನೀಡಿರುವ ಹೆಗ್ಗಳಿಕೆ ಕುಂಬಾರ ಸಮುದಾಯದಾಗಿರುತ್ತದೆ. ದೇಶದ ಬೇರೆ ಬೇರೆ ಭಾಗಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡಿರುವ ಕುಂಬಾರ ಸಮುದಾಯ ಧಾರ್ಮಿಕ, ಅಧ್ಯಾತ್ಮಿಕ, ಸಾಂಸ್ಕೃತಿಕ ಹಿನ್ನಲೆಯನ್ನು ಹೊಂದಿದೆ. ಅತ್ಯಂತ ಕಷ್ಟ, ಸಹಿಷ್ಣು ಪ್ರಾಮಾಣಿಕವಾಗಿ ಬದುಕಿಕೊಂಡು ಬಂದಿರುವ ಈ ಸಮುದಾಯದ ಜನರ ಪರಿಶ್ರಮಿಗಳು ಮೃದು ಸ್ವಭಾವದವರು ಹಾಗೂ ತಮ್ಮ ಕಟ್ಟುಪಾಡು ಆಚಾರ-ವಿಚಾರ ಸಂಪ್ರದಾಯವನ್ನು ಪಾಲಿಸಿಗೊಂಡು ಬರುವಲ್ಲಿ ಬದ್ದರು ಎಂದು ಸಮಾವೇಶ ಮತ್ತು ಕ್ರೀಡಾಕೂಟ ಕಾರ್ಯಧ್ಯಕ್ಷರು ವಕೀಲರಾದ ಉದಯ ಬಿ.ಕೆ ಹೇಳಿದರು.

ಅವರು ಫೆ.18ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕುಂಬಾರ ಸಮುದಾಯವನ್ನು ಸಂಘಟಿಸುವ ಉದ್ದೇಶದಿಂದ ಹಾಗೂ ಕುಂಬಾರ ಸಮುದಾಯದ ಮೂಲ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶ ಹಾಗೂ ಸಮುದಾಯದ ಜನರಿಗೆ ವಿವಿಧ ವಿಷಯಗಳಲ್ಲಿ ಜಾಗೃತಿ ಮೂಡಿಸುವ ಧ್ಯೆಯದೊಂದಿಗೆ ಕುಂಬಾರರಿಗೆ ರಾಜಕೀಯ ಸ್ಥಾನಮಾನ ಕುಲವೃತ್ತಿ ಕುಂಬಾರಿಕೆಯನ್ನು ಉಳಿಸಿ ಬೆಳೆಸಲು ಸರಕಾರದಿಂದ ವಿಶೇಷ ಸೌಲಭ್ಯಕ್ಕೆ ಒತ್ತಾಯಿಸಿ ದ.ಕ ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ಸಮಾಜದ ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಕಾರ್ಯಕ್ರಮವು ಬಂದಾರು ಶ್ರೀ ರಾಮನಗರ ಶಿವಪ್ರಿಯ ಮೈದಾನದಲ್ಲಿ ಫೆ.22 ರಂದು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಂಬಾರರ ಮಹಾ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರ್ ಚೌಟ ಶೆಟ್ಟಿ ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ, ಸಂಸದರಾದ ಬ್ರಿಜೇಶ್ ಚೌಟ, ಎಮ್.ಎಲ್.ಸಿ ಕಿಶೋರ್ ಕುಮಾರ್, ರಾಜೀವ ಗಾಂಧಿ ವಿ.ವಿ ಸೆನೆಟ್ ಸದಸ್ಯರಾದ ಶ್ರೀನಿವಾಸ ಮೇಲು, ಸಮುದಾಯದ ನಾಯಕರಾದ ಡಾ|| ಅಣ್ಣಯ್ಯ ಕುಲಾಲ್, ಪದ್ಮಕುಮಾರ್, ಬಾಸ್ಕರ ಪೆರುವಾಯಿ, ಉದ್ಯಮಿ ಕಿರಣ್ ಚಂದ್ರ, ಹರೀಶ್ ಕಾರಿಂಜ ಹಾಗೂ ಕುಂಬಾರ ಸಮುದಾಯದ ವಿವಿಧ ಗುರಿಕಾರರು ನಾಯಕರುಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬಂದಾರು ಕುಂಬಾರರ ಸೇವಾ ಸಂಘದ ಅಧ್ಯಕ್ಷ ಕೆಂಚಪ್ಪ ಕುಂಬಾರ, ಕಾರ್ಯದರ್ಶಿ ಮಾಜಿ ಅಧ್ಯಕ್ಷ ರಮೇಶ್ ಕುಂಬಾರ, ಉಪಸ್ಥಿತರಿದ್ದರು.

ಕಾರ್ಯದರ್ಶಿ ಪ್ರಕಾಶ್ ಕೆ ಸ್ವಾಗತಿಸಿ, ಜೈ ಶ್ರೀರಾಮ ಗೆಳೆಯರ ಬಳಗದ ಕಾರ್ಯದರ್ಶಿ ಚಂದ್ರಶೇಖರ ಬಿ.ಕೆ ಧನ್ಯವಾದವಿತ್ತರು.

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya
error: Content is protected !!