37.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

ಬೆಳ್ತಂಗಡಿ : ಗುರುವಾಯನಕೆರೆಯಿಂದ ಉಪ್ಪಿನಂಗಡಿ ತನಕದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರುಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಉಪಸ್ಥಿತರಿದ್ದರು.


ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಮನವಿ ಮೇರೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರದ ಜೊತೆ ಮಾತನಾಡಿ, ಕೇಂದ್ರ ರಸ್ತೆ ಮೂಲ ಸೌಕರ್ಯ ನಿಧಿಯಿಂದ ರಸ್ತೆ ಅಭಿವೃದ್ಧಿಗೆ ರೂ.6 ಕೋಟಿ ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು.


ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ,ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ,ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಮುಖರಾದ ಈಶ್ವರ ಭೈರ, ವಸಂತಿ ಮಚ್ಚಿನ,ವಡಿವೇಲು, ಮಹಾಬಲ ಗೌಡ,ಉಮೇಶ್ ಕುಲಾಲ್, ರಕ್ಷೀತ್ ಪಣೆಕ್ಕರ್, ಮಂಜುನಾಥ ಕುಂಬ್ಳೆ,, ಕಾಂತಪ್ಪ ಗೌಡ, ಆಶಾಲತಾ, ಸುಬ್ರಹ್ಮಣ್ಯ ಕುಮಾರ್ ಅಗತ೯, ರಾಜ್ ಪ್ರಕಾಶ್ ಶೆಟ್ಟಿ, ರಾಜೇಶ್ ಕುಲಾಲ್ ಮಾಲಾಡಿ, ಸಂತೋಷ್ ಗುರುವಾಯನಕೆರೆ, ಉದಯ ಬಂದಾರು, ನವೀನ್ ನೆರಿಯ, ಪ್ರಭಾಕರ ಆಚಾರ್ಯ, ಗಣೇಶ್ ಗೌಡ ನಾವೂರು, ಶರತ್ ಕುಮಾರ್ ಶೆಟ್ಟಿ, ದಿವಾಕರ್ ಗೇರುಕಟ್ಟೆ, ಅರುಣ್ ಗುರುವಾಯನಕೆರೆ, ಜಗದೀಶ್ ಕನ್ನಾಜೆ, ಸೀತಾರಾಮ ಬೆಳಾಲ್, ವಿಠಲ ಮೂಲ್ಯ, ಸುಂದರ ಹೆಗ್ಡೆ ವೇಣೂರು, ಮೋಹನ್ ಅಂಡಿಂಜೆ, ಚಂದ್ರಕಾಂತ್ ನಿಡ್ಡಾಜೆ,ರಕ್ಷಿತ್ ಪಣೆಕ್ಕರ,ಗಣೇಶ್ ಗೌಡ ನಾವೂರು,ಜನಾರ್ಧನ‌ ಗೌಡ ಗೇರುಕಟ್ಟೆ, ಈಶ್ವರ ಬೈರ, ನವೀನ್ ನೆರಿಯ, ಗೀರೀಶ್ ಡೋಂಗ್ರೆ, ಜಯಾನಂದ ಕಲ್ಲಾಪು, ಭಾರತಿ ಎಸ್ ಶೆಟ್ಟಿ,ಆಶಾಲತಾ ಕುವೆಟ್ಟು ,ಪ್ರದೀಪ್ ಶೆಟ್ಟಿ, ಉದಯ ಬಂದಾರು, ಶುಭಕರ ಪೂಜಾರಿ ಕುದ್ಯಾಡಿ,ರವಿ ಪೂಜಾರಿ ಹಾರಡ್ಡೆ, ಪ್ರಕಾಶ್ ಜೈನ್ ಮಲವಂತಿಗೆ, ಪ್ರಭಾಕರ ಆಚಾರ್ಯ ಸವಣಾಲು, ದಿನೇಶ್ ಸೋಣಂದೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
error: Content is protected !!