25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಸಲಾದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ ಕೊಕ್ಕಡ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾತೃಶ್ರೀ ಅಮ್ಮನವರು ಉಚಿತ ಟೈಲರಿಂಗ್ ತರಬೇತಿ ನೀಡಲು ಅವಕಾಶ ಕಲ್ಪಿಸಿದ್ದು 3 ತಿಂಗಳ ಕಾಲ ಕಲಿತ ವಿದ್ಯೆ ನಿಮ್ಮ ಮುಂದಿನ ಭವಿಷ್ಯಕ್ಕೆ ದಾರಿ ದೀಪವಾಗಲಿ ಎಂದು ಶುಭ ಹಾರೈಸಿದರು .

ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಾರಪಳಿಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಸರಸ್ವತಿ ರವರು ಮಹಿಳೆಯರು ಮನೆಯಲ್ಲಿ ಕೂತು ಮನೆಯ ಕೆಲಸದೊಂದಿಗೆ ಸ್ವಂತ ಉದ್ಯೋಗವನ್ನು ಮಾಡಿ ಮನೆಯವರಿಗೆ ನೆರವಾಗಲು ಟೈಲರಿಂಗ್ ಉದ್ಯಮವು ಉತ್ತಮ ಅವಕಾಶವಾಗಿದ್ದು ಇಲ್ಲಿ ಪಡೆದ ತರಬೇತಿಯು ಇಲ್ಲಿಗೆ ಕೊನೆಗೊಳ್ಳದೆ ನಿರಂತರವಾಗಿ ಇದನ್ನು ಮುಂದುವರಿಸಿ ಸ್ವಉದ್ಯೋಗವನ್ನು ಮಾಡುವುದರೊಂದಿಗೆ ಉತ್ತಮ ಆದಾಯವನ್ನು ಗಳಿಸಿ ಎಂದರು. ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಉಸ್ಮಾನ್ ರವರು ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರರವರು ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕರಾದ ಶ್ರೀಮತಿ ಸುಶೀಲರವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತರಬೇತಿಯನ್ನ ಪಡೆದುಕೊಂಡ ಸಫ್ರಿನಾ, ರೀನಾ, ಅಶ್ವಿನಿ ಮತ್ತು ಲಲಿತಾರವರು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಉಪ್ಪಾರ ಕಲಿಕೆ ಸೇವಾಪ್ರತಿನಿಧಿ ರೋಹಿಣಿ ಉಪಸ್ಥಿತರಿದ್ದರು ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯದಿಕಾರಿಯವರಾದ ಮಧುರಾವಸಂತ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಕುಸುಮರವರು ಸ್ವಾಗತಿಸಿ, ಮೇಲ್ವಿಚಾರಕರಾದ ಭಾಗೀರಥಿ ಧನ್ಯವಾದ ನೀಡಿದರು.

Related posts

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya
error: Content is protected !!