September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಎಲ್ಕಜೇ ಗುತ್ತಿನ ಆಡಳಿತ ಮೊಕ್ತೇಸರ ದಿನೇಶ್ ಅಮೀನ್ ಕುಂದಾಪುರ ರವರ ನೇತೃತ್ವದಲ್ಲಿ ಎಲ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಯಜಮಾಡಿಯ ಮಹೇಶ ಶಾಂತಿ ಯವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಅವರು ಮಾತನಾಡುತ್ತಾ ಪವಿತ್ರ ಪುಣ್ಯಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ಜರಗುವ ಜಾತ್ರೋತ್ಸವದೊಂದಿಗೆ ಮಾರ್ಚ್ 2 ರಂದು ಆದಿತ್ಯವಾರ ಮಹಿಳೆಯರಿಗಾಗಿ ಮಡಿಲು ಸೇವೆಯ ವಿಶಿಷ್ಟ ಕಾರ್ಯಕ್ರಮ ಜರಗಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸಿದರು. ಬೆಳ್ತಂಗಡಿ ತಾಲೂಕಿನ ಮುಖ್ಯ ಸಂಚಾಲಕ ನಿತ್ಯಾನಂದ ನಾವರ ಸ್ವಾಗತಿಸಿ ಪ್ರಸ್ತಾವಿಸಿದರು.


ರಕ್ಷಿತ್ ಶಿವರಾಮ್, ಜಯರಾಮ ಬಂಗೇರ, ದಿನೇಶ್ ಬೆಳಿಬೈಲು, ಮೋಹನ್ ಪೂಜಾರಿ , ಬಾಲಕೃಷ್ಣ ಪೂಜಾರಿ, ಸುನಿಲ್ ಪೂಜಾರಿ,ಡಾ. ಸುಧಾಮ್ಸ್, ಶ್ರೀಮತಿ ಲೋಲಾಕ್ಷಿ ಶೇಖರ ಬಂಗೇರ, ಶ್ರೀಮತಿ ಸಂಗೀತ ಪಿ ಹೇರಾಜೆ, ಶ್ರೀಮತಿ ರಜನಿ ಪೂಜಾರಿ, ಹರೀಶ್ ಪೂಜಾರಿ ಸೂಲಬೆಟ್ಟು, ಹಾಗೂ ನೂರಾರು ಭಕ್ತರು ಜೊತೆಗಿದ್ದರು.

Related posts

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!