30.2 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

ಬಳಂಜ: ದೇಯಿ ಬೈದೆದಿ ಕೋಟಿ- ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವ ಬಗ್ಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯು ಫೆ.15 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ವಹಿಸಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು .

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ,ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್‌ಎಸ್,ದೇಜಪ್ಪ ಪೂಜಾರಿ ಸುಧಾಮ,ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು,ದಿನೇಶ್ ಪೂಜಾರಿ ಅಂತರ,ಯತೀಶ್ ವೈ.ಎಲ್,ಪ್ರವೀಣ್ ಡಿ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya
error: Content is protected !!