September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಸಲಾದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ ಕೊಕ್ಕಡ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾತೃಶ್ರೀ ಅಮ್ಮನವರು ಉಚಿತ ಟೈಲರಿಂಗ್ ತರಬೇತಿ ನೀಡಲು ಅವಕಾಶ ಕಲ್ಪಿಸಿದ್ದು 3 ತಿಂಗಳ ಕಾಲ ಕಲಿತ ವಿದ್ಯೆ ನಿಮ್ಮ ಮುಂದಿನ ಭವಿಷ್ಯಕ್ಕೆ ದಾರಿ ದೀಪವಾಗಲಿ ಎಂದು ಶುಭ ಹಾರೈಸಿದರು .

ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಾರಪಳಿಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಸರಸ್ವತಿ ರವರು ಮಹಿಳೆಯರು ಮನೆಯಲ್ಲಿ ಕೂತು ಮನೆಯ ಕೆಲಸದೊಂದಿಗೆ ಸ್ವಂತ ಉದ್ಯೋಗವನ್ನು ಮಾಡಿ ಮನೆಯವರಿಗೆ ನೆರವಾಗಲು ಟೈಲರಿಂಗ್ ಉದ್ಯಮವು ಉತ್ತಮ ಅವಕಾಶವಾಗಿದ್ದು ಇಲ್ಲಿ ಪಡೆದ ತರಬೇತಿಯು ಇಲ್ಲಿಗೆ ಕೊನೆಗೊಳ್ಳದೆ ನಿರಂತರವಾಗಿ ಇದನ್ನು ಮುಂದುವರಿಸಿ ಸ್ವಉದ್ಯೋಗವನ್ನು ಮಾಡುವುದರೊಂದಿಗೆ ಉತ್ತಮ ಆದಾಯವನ್ನು ಗಳಿಸಿ ಎಂದರು. ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಉಸ್ಮಾನ್ ರವರು ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರರವರು ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕರಾದ ಶ್ರೀಮತಿ ಸುಶೀಲರವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತರಬೇತಿಯನ್ನ ಪಡೆದುಕೊಂಡ ಸಫ್ರಿನಾ, ರೀನಾ, ಅಶ್ವಿನಿ ಮತ್ತು ಲಲಿತಾರವರು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಉಪ್ಪಾರ ಕಲಿಕೆ ಸೇವಾಪ್ರತಿನಿಧಿ ರೋಹಿಣಿ ಉಪಸ್ಥಿತರಿದ್ದರು ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯದಿಕಾರಿಯವರಾದ ಮಧುರಾವಸಂತ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಕುಸುಮರವರು ಸ್ವಾಗತಿಸಿ, ಮೇಲ್ವಿಚಾರಕರಾದ ಭಾಗೀರಥಿ ಧನ್ಯವಾದ ನೀಡಿದರು.

Related posts

ಬೆಳಾಲು ಪ್ರೌಢ ಶಾಲೆ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!