23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಂಟು ಗ್ರಾಮಗಳನ್ನು ಒಳಗೊಂಡ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ, ಉದ್ಯಮಿ, ಸಮಾಜಸೇವಕ, ಸಂಘಟಕ ಸುಂದರ ಹೆಗ್ಡೆ ಬಿಇ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಬರ್ಕಜೆ ಫೆ.19 ರಂದು ಅವಿರೋಧವಾಗಿ ಆಯ್ಕೆಯಾದರು.

ನಿರ್ದೇಶಕರುಗಳಾದ ರಾಮದಾಸ ನಾಯಕ್, ಸಂದೀಪ್ ಹೆಗ್ಡೆ, ಸಂತೋಷ್ ಜೈನ್, ಪ್ರವೀಣ್ ಪರಿಯೊಟ್ಟು,ಪ್ರಶಾಂತ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರಾಜು ನಾಯ್ಕ್, ನಾಗಪ್ಪ, ಆಶಾ ಸುಂದರ, ರೋಹಿನಿ ಪ್ರಕಾಶ್ ಉಪಸ್ಥಿತರಿದ್ದರು.

ಎಂಟು ಗ್ರಾಮ ವ್ಯಾಪ್ತಿಯ ಸೊಸೈಟಿ ವೇಣೂರು, ಮೂಡುಕೋಡಿ, ಕರಿಮಣೇಲು, ನಿಟ್ಟಡೆ, ಕುಕ್ಕೇಡಿ, ಅಂಡಿಂಜೆ, ಬಜಿರೆ ಹಾಗೂ ಗುಂಡೂರಿ ಗ್ರಾಮಗಳ ವ್ಯಾಪ್ತಿಗೆ ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ರಿಂದ 2029-30ರವರೆಗಿನ ಅವಧಿಗೆ ಜ.12 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಭಾರತೀಯ ಜನತಾ ಪಾರ್ಟಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಗೌರವಿಸಲಾಯಿತು.ಜಯಂತ್ ಕೋಟ್ಯಾನ್ ಸೇರಿದಂತೆ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya
error: Content is protected !!