25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಂಟು ಗ್ರಾಮಗಳನ್ನು ಒಳಗೊಂಡ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ, ಉದ್ಯಮಿ, ಸಮಾಜಸೇವಕ, ಸಂಘಟಕ ಸುಂದರ ಹೆಗ್ಡೆ ಬಿಇ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಬರ್ಕಜೆ ಫೆ.19 ರಂದು ಅವಿರೋಧವಾಗಿ ಆಯ್ಕೆಯಾದರು.

ನಿರ್ದೇಶಕರುಗಳಾದ ರಾಮದಾಸ ನಾಯಕ್, ಸಂದೀಪ್ ಹೆಗ್ಡೆ, ಸಂತೋಷ್ ಜೈನ್, ಪ್ರವೀಣ್ ಪರಿಯೊಟ್ಟು,ಪ್ರಶಾಂತ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರಾಜು ನಾಯ್ಕ್, ನಾಗಪ್ಪ, ಆಶಾ ಸುಂದರ, ರೋಹಿನಿ ಪ್ರಕಾಶ್ ಉಪಸ್ಥಿತರಿದ್ದರು.

ಎಂಟು ಗ್ರಾಮ ವ್ಯಾಪ್ತಿಯ ಸೊಸೈಟಿ ವೇಣೂರು, ಮೂಡುಕೋಡಿ, ಕರಿಮಣೇಲು, ನಿಟ್ಟಡೆ, ಕುಕ್ಕೇಡಿ, ಅಂಡಿಂಜೆ, ಬಜಿರೆ ಹಾಗೂ ಗುಂಡೂರಿ ಗ್ರಾಮಗಳ ವ್ಯಾಪ್ತಿಗೆ ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ರಿಂದ 2029-30ರವರೆಗಿನ ಅವಧಿಗೆ ಜ.12 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಭಾರತೀಯ ಜನತಾ ಪಾರ್ಟಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಗೌರವಿಸಲಾಯಿತು.ಜಯಂತ್ ಕೋಟ್ಯಾನ್ ಸೇರಿದಂತೆ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!