22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ವಿದ್ಯಾಭ್ಯಾಸದ ಜೊತೆಗೆ ವೃತ್ತಿ ಕೌಶಲ್ಯವನ್ನು ಕಲಿತರೆ ಜೀವನ ನಡೆಸಲು ಸುಲಭ ಸಾಧ್ಯವಾಗುತ್ತದೆ. ನಾವು ಕಲಿಯುವಾಗ ವಿಷಯದ ಬಗ್ಗೆ ತಿಳಿದು, ಪ್ರಾಯೋಗಿಕವಾಗಿ ಮಾಡಿ ಅದನ್ನು ಅನುಭವಿಸಿದಾಗ ಮಾತ್ರ ಹೆಚ್ಚು ಪ್ರಯೋಜನಕಾರಿ. ಕೌಶಲ್ಯ ಇರುವಂತಹ ಜನ ಎಲ್ಲಿ ಬೇಕಾದರು ಬದುಕಬಲ್ಲರು. ಪ್ರತಿಯೊಬ್ಬ ವ್ಯಕ್ತಿಯಲ್ಲಿ ಸಹ ಕೌಶಲ್ಯ ಇರುತ್ತದೆ ಅದರ ಅರಿವು ಮತ್ತು ಉಪಯೋಗ ಮಾಡಿಕೊಳ್ಳಬೇಕು. ಜೀವನದಲ್ಲಿ ಎರಡು ಕಿಂಗ್ (Smoking, Driking) ಗಳಿಂದ ಮತ್ತು ಒಂದು ಕ್ವೀನ್ (Mobil Phone)ನಿಂದ ದೂರ ಇದ್ದರೆ ಯಶಸ್ಸು ಆಗುತ್ತಾರೆ. ಇದಕ್ಕೆ ನಮ್ಮಲ್ಲಿ ಬದ್ದತೆ, ಕಠಿಣ ಪರಿಶ್ರಮ, ಶಿಸ್ತು, ನೈತಿಕತೆ ಇಟ್ಟುಕೊಂಡು ವೃತ್ತಿಯನ್ನು ನಡೆಸಿ. ಪ್ರತಿಯೋಬ್ಬರು ಕೌಶಲ್ಯವಂತರಾಗಬೇಕು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೂರದರ್ಶೀತ್ವದ ಈ ರುಡ್ ಸೆಟ್ ಸಂಸ್ಥೆ ಲಕ್ಷಾಂತರ ಯುವಜನರಿಗೆ ಕೌಶಲ್ಯ ನೀಡಿದೆ ಇದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಯಶಸ್ವಿಯಾಗಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿಯುತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ಮಾತನಾಡಿ ನಿಮ್ಮ ವ್ಯವಹಾರಗಳನ್ನು ಬ್ಯಾಂಕಿನ ಮೂಲಕವೇ ನಡೆಸಿ ಇದರಿಂದ ನಿಮ್ಮ ವ್ಯವಹಾರಕ್ಕೆ ಬೇಕಾದ ಸಾಲ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ ಎಂದು ಶುಭ ಹಾರೈಸಿದರು.


ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ತರಬೇತಿಯ ಹಿನ್ನೋಟ ನೀಡಿ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು.


ಶಿಬಿರಾರ್ಥಿ ನಿತೇಶ್ ಅವರು ಪ್ರಾರ್ಥನೆ ನೆರವೇರಿಸಿದರು ಸಂದೀಪ್, ಪರಶುರಾಮ, ಪ್ರಥ್ವೀರಾಜ್ ತಮ್ಮ ತರಬೇತಿಯ ಅನುಭವ ಹಂಚಿಕೊಂಡರು.

Related posts

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!