April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ವಿದ್ಯಾಭ್ಯಾಸದ ಜೊತೆಗೆ ವೃತ್ತಿ ಕೌಶಲ್ಯವನ್ನು ಕಲಿತರೆ ಜೀವನ ನಡೆಸಲು ಸುಲಭ ಸಾಧ್ಯವಾಗುತ್ತದೆ. ನಾವು ಕಲಿಯುವಾಗ ವಿಷಯದ ಬಗ್ಗೆ ತಿಳಿದು, ಪ್ರಾಯೋಗಿಕವಾಗಿ ಮಾಡಿ ಅದನ್ನು ಅನುಭವಿಸಿದಾಗ ಮಾತ್ರ ಹೆಚ್ಚು ಪ್ರಯೋಜನಕಾರಿ. ಕೌಶಲ್ಯ ಇರುವಂತಹ ಜನ ಎಲ್ಲಿ ಬೇಕಾದರು ಬದುಕಬಲ್ಲರು. ಪ್ರತಿಯೊಬ್ಬ ವ್ಯಕ್ತಿಯಲ್ಲಿ ಸಹ ಕೌಶಲ್ಯ ಇರುತ್ತದೆ ಅದರ ಅರಿವು ಮತ್ತು ಉಪಯೋಗ ಮಾಡಿಕೊಳ್ಳಬೇಕು. ಜೀವನದಲ್ಲಿ ಎರಡು ಕಿಂಗ್ (Smoking, Driking) ಗಳಿಂದ ಮತ್ತು ಒಂದು ಕ್ವೀನ್ (Mobil Phone)ನಿಂದ ದೂರ ಇದ್ದರೆ ಯಶಸ್ಸು ಆಗುತ್ತಾರೆ. ಇದಕ್ಕೆ ನಮ್ಮಲ್ಲಿ ಬದ್ದತೆ, ಕಠಿಣ ಪರಿಶ್ರಮ, ಶಿಸ್ತು, ನೈತಿಕತೆ ಇಟ್ಟುಕೊಂಡು ವೃತ್ತಿಯನ್ನು ನಡೆಸಿ. ಪ್ರತಿಯೋಬ್ಬರು ಕೌಶಲ್ಯವಂತರಾಗಬೇಕು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೂರದರ್ಶೀತ್ವದ ಈ ರುಡ್ ಸೆಟ್ ಸಂಸ್ಥೆ ಲಕ್ಷಾಂತರ ಯುವಜನರಿಗೆ ಕೌಶಲ್ಯ ನೀಡಿದೆ ಇದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಯಶಸ್ವಿಯಾಗಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿಯುತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿಯಾಗಬೇಕು. ಪಡೆದ ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ಮಾತನಾಡಿ ನಿಮ್ಮ ವ್ಯವಹಾರಗಳನ್ನು ಬ್ಯಾಂಕಿನ ಮೂಲಕವೇ ನಡೆಸಿ ಇದರಿಂದ ನಿಮ್ಮ ವ್ಯವಹಾರಕ್ಕೆ ಬೇಕಾದ ಸಾಲ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ ಎಂದು ಶುಭ ಹಾರೈಸಿದರು.


ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ತರಬೇತಿಯ ಹಿನ್ನೋಟ ನೀಡಿ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು.


ಶಿಬಿರಾರ್ಥಿ ನಿತೇಶ್ ಅವರು ಪ್ರಾರ್ಥನೆ ನೆರವೇರಿಸಿದರು ಸಂದೀಪ್, ಪರಶುರಾಮ, ಪ್ರಥ್ವೀರಾಜ್ ತಮ್ಮ ತರಬೇತಿಯ ಅನುಭವ ಹಂಚಿಕೊಂಡರು.

Related posts

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya
error: Content is protected !!