25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಸಲಾದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ ಕೊಕ್ಕಡ ಹಳ್ಳಿಂಗೇರಿ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಾತೃಶ್ರೀ ಅಮ್ಮನವರು ಉಚಿತ ಟೈಲರಿಂಗ್ ತರಬೇತಿ ನೀಡಲು ಅವಕಾಶ ಕಲ್ಪಿಸಿದ್ದು 3 ತಿಂಗಳ ಕಾಲ ಕಲಿತ ವಿದ್ಯೆ ನಿಮ್ಮ ಮುಂದಿನ ಭವಿಷ್ಯಕ್ಕೆ ದಾರಿ ದೀಪವಾಗಲಿ ಎಂದು ಶುಭ ಹಾರೈಸಿದರು .

ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಾರಪಳಿಕೆ ಶಾಲೆಯ ಮುಖ್ಯೋಪಾಧ್ಯಾಯರಾದ ಸರಸ್ವತಿ ರವರು ಮಹಿಳೆಯರು ಮನೆಯಲ್ಲಿ ಕೂತು ಮನೆಯ ಕೆಲಸದೊಂದಿಗೆ ಸ್ವಂತ ಉದ್ಯೋಗವನ್ನು ಮಾಡಿ ಮನೆಯವರಿಗೆ ನೆರವಾಗಲು ಟೈಲರಿಂಗ್ ಉದ್ಯಮವು ಉತ್ತಮ ಅವಕಾಶವಾಗಿದ್ದು ಇಲ್ಲಿ ಪಡೆದ ತರಬೇತಿಯು ಇಲ್ಲಿಗೆ ಕೊನೆಗೊಳ್ಳದೆ ನಿರಂತರವಾಗಿ ಇದನ್ನು ಮುಂದುವರಿಸಿ ಸ್ವಉದ್ಯೋಗವನ್ನು ಮಾಡುವುದರೊಂದಿಗೆ ಉತ್ತಮ ಆದಾಯವನ್ನು ಗಳಿಸಿ ಎಂದರು. ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಉಸ್ಮಾನ್ ರವರು ಗ್ರಾಮ ಪಂಚಾಯಿತಿ ಸದಸ್ಯರಾದ ಪವಿತ್ರರವರು ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕರಾದ ಶ್ರೀಮತಿ ಸುಶೀಲರವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತರಬೇತಿಯನ್ನ ಪಡೆದುಕೊಂಡ ಸಫ್ರಿನಾ, ರೀನಾ, ಅಶ್ವಿನಿ ಮತ್ತು ಲಲಿತಾರವರು ಅನಿಸಿಕೆಯನ್ನು ವ್ಯಕ್ತಪಡಿಸಿದರು. ಉಪ್ಪಾರ ಕಲಿಕೆ ಸೇವಾಪ್ರತಿನಿಧಿ ರೋಹಿಣಿ ಉಪಸ್ಥಿತರಿದ್ದರು ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯದಿಕಾರಿಯವರಾದ ಮಧುರಾವಸಂತ್ ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಕುಸುಮರವರು ಸ್ವಾಗತಿಸಿ, ಮೇಲ್ವಿಚಾರಕರಾದ ಭಾಗೀರಥಿ ಧನ್ಯವಾದ ನೀಡಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya
error: Content is protected !!