23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ ನವರತ್ನ ಉತ್ಸವ ಪ್ರಾರಂಭಗೊಂಡಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ ನವರತ್ನ ಉತ್ಸವದಲ್ಲಿ ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ ಆಭರಣಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.

ನವರತ್ನ ಆಭರಣಗಳದ ಉಂಗುರ , ನೆಕ್ಲೇಸ್, ಬ್ರೇಸ್ಲೆಟ್ಸ್, ಪದಕ, ಬಳೆ ಮತ್ತು ಸರಗಳು ಅಧಿಕ ವಿನ್ಯಾಸದ ನವರತ್ನ ಆಭರಣಗಳ ಅಮೋಘ ಸಂಗ್ರಹವಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಬೆಳ್ತಂಗಡಿ ಮುಳಿಯ ಮಳಿಗೆಯಲ್ಲಿ ಎಕ್ಸಲ್ ಕಾಲೇಜ್ ಗುರುವಾಯನಕೆರೆಯ ಉಪನ್ಯಾಸಕರುಗಳಾದ ಶ್ರೀಮತಿ ಸಹನಾ ಜೈನ್, ಕುಮಾರಿ ನಿಶಾ ಪೂಜಾರಿ, ಶ್ರೀಮತಿ ಶ್ರುತಿ ಶೆಟ್ಟಿ ಅವರು ನವರತ್ನ ಆಭರಣಗಳನ್ನು ಅನಾವರಣಗೊಳಿಸಿದರು.

ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಹಾಗೂ ಉಪ ಶಾಖಾ ಪ್ರಬಂಧಕಾರದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
error: Content is protected !!