July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ ನವರತ್ನ ಉತ್ಸವ ಪ್ರಾರಂಭಗೊಂಡಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ ನವರತ್ನ ಉತ್ಸವದಲ್ಲಿ ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ ಆಭರಣಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.

ನವರತ್ನ ಆಭರಣಗಳದ ಉಂಗುರ , ನೆಕ್ಲೇಸ್, ಬ್ರೇಸ್ಲೆಟ್ಸ್, ಪದಕ, ಬಳೆ ಮತ್ತು ಸರಗಳು ಅಧಿಕ ವಿನ್ಯಾಸದ ನವರತ್ನ ಆಭರಣಗಳ ಅಮೋಘ ಸಂಗ್ರಹವಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಬೆಳ್ತಂಗಡಿ ಮುಳಿಯ ಮಳಿಗೆಯಲ್ಲಿ ಎಕ್ಸಲ್ ಕಾಲೇಜ್ ಗುರುವಾಯನಕೆರೆಯ ಉಪನ್ಯಾಸಕರುಗಳಾದ ಶ್ರೀಮತಿ ಸಹನಾ ಜೈನ್, ಕುಮಾರಿ ನಿಶಾ ಪೂಜಾರಿ, ಶ್ರೀಮತಿ ಶ್ರುತಿ ಶೆಟ್ಟಿ ಅವರು ನವರತ್ನ ಆಭರಣಗಳನ್ನು ಅನಾವರಣಗೊಳಿಸಿದರು.

ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಹಾಗೂ ಉಪ ಶಾಖಾ ಪ್ರಬಂಧಕಾರದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಉತ್ಪನ್ನಗಳ ತಯಾರಿಕ ಘಟಕ ಶುಭಾರಂಭ:ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್-ಕಾಂಕ್ರೀಟ್ ಕಂಪೌಂಡ್ ವಾಲ್‌, ಕಾಳುಮೆಣಸು ಬೇಲಿ ಕಂಬ ಲಭ್ಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya
error: Content is protected !!