25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ ನವರತ್ನ ಉತ್ಸವ ಪ್ರಾರಂಭಗೊಂಡಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ ನವರತ್ನ ಉತ್ಸವದಲ್ಲಿ ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ ಆಭರಣಗಳ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.

ನವರತ್ನ ಆಭರಣಗಳದ ಉಂಗುರ , ನೆಕ್ಲೇಸ್, ಬ್ರೇಸ್ಲೆಟ್ಸ್, ಪದಕ, ಬಳೆ ಮತ್ತು ಸರಗಳು ಅಧಿಕ ವಿನ್ಯಾಸದ ನವರತ್ನ ಆಭರಣಗಳ ಅಮೋಘ ಸಂಗ್ರಹವಿದೆ. ಮಹಿಳೆಯರ ಮನಸೂರೆಗೊಳಿಸುವ ರೀತಿಯಲ್ಲಿ ಚಿನ್ನಾಭರಣದ ಸಂಗ್ರಹ ಹೊಂದಿರುವ ಮುಳಿಯದಲ್ಲಿ ಗ್ರಾಹಕರು ಉತ್ಸವದ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಬೆಳ್ತಂಗಡಿ ಮುಳಿಯ ಮಳಿಗೆಯಲ್ಲಿ ಎಕ್ಸಲ್ ಕಾಲೇಜ್ ಗುರುವಾಯನಕೆರೆಯ ಉಪನ್ಯಾಸಕರುಗಳಾದ ಶ್ರೀಮತಿ ಸಹನಾ ಜೈನ್, ಕುಮಾರಿ ನಿಶಾ ಪೂಜಾರಿ, ಶ್ರೀಮತಿ ಶ್ರುತಿ ಶೆಟ್ಟಿ ಅವರು ನವರತ್ನ ಆಭರಣಗಳನ್ನು ಅನಾವರಣಗೊಳಿಸಿದರು.

ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕಾರದ ಲೋಹಿತ್ ಕುಮಾರ್ ಹಾಗೂ ಉಪ ಶಾಖಾ ಪ್ರಬಂಧಕಾರದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!