29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಂಟು ಗ್ರಾಮಗಳನ್ನು ಒಳಗೊಂಡ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ, ಉದ್ಯಮಿ, ಸಮಾಜಸೇವಕ, ಸಂಘಟಕ ಸುಂದರ ಹೆಗ್ಡೆ ಬಿಇ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಬರ್ಕಜೆ ಫೆ.19 ರಂದು ಅವಿರೋಧವಾಗಿ ಆಯ್ಕೆಯಾದರು.

ನಿರ್ದೇಶಕರುಗಳಾದ ರಾಮದಾಸ ನಾಯಕ್, ಸಂದೀಪ್ ಹೆಗ್ಡೆ, ಸಂತೋಷ್ ಜೈನ್, ಪ್ರವೀಣ್ ಪರಿಯೊಟ್ಟು,ಪ್ರಶಾಂತ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರಾಜು ನಾಯ್ಕ್, ನಾಗಪ್ಪ, ಆಶಾ ಸುಂದರ, ರೋಹಿನಿ ಪ್ರಕಾಶ್ ಉಪಸ್ಥಿತರಿದ್ದರು.

ಎಂಟು ಗ್ರಾಮ ವ್ಯಾಪ್ತಿಯ ಸೊಸೈಟಿ ವೇಣೂರು, ಮೂಡುಕೋಡಿ, ಕರಿಮಣೇಲು, ನಿಟ್ಟಡೆ, ಕುಕ್ಕೇಡಿ, ಅಂಡಿಂಜೆ, ಬಜಿರೆ ಹಾಗೂ ಗುಂಡೂರಿ ಗ್ರಾಮಗಳ ವ್ಯಾಪ್ತಿಗೆ ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ರಿಂದ 2029-30ರವರೆಗಿನ ಅವಧಿಗೆ ಜ.12 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಭಾರತೀಯ ಜನತಾ ಪಾರ್ಟಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಗೌರವಿಸಲಾಯಿತು.ಜಯಂತ್ ಕೋಟ್ಯಾನ್ ಸೇರಿದಂತೆ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!