30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಂಟು ಗ್ರಾಮಗಳನ್ನು ಒಳಗೊಂಡ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ, ಉದ್ಯಮಿ, ಸಮಾಜಸೇವಕ, ಸಂಘಟಕ ಸುಂದರ ಹೆಗ್ಡೆ ಬಿಇ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಬರ್ಕಜೆ ಫೆ.19 ರಂದು ಅವಿರೋಧವಾಗಿ ಆಯ್ಕೆಯಾದರು.

ನಿರ್ದೇಶಕರುಗಳಾದ ರಾಮದಾಸ ನಾಯಕ್, ಸಂದೀಪ್ ಹೆಗ್ಡೆ, ಸಂತೋಷ್ ಜೈನ್, ಪ್ರವೀಣ್ ಪರಿಯೊಟ್ಟು,ಪ್ರಶಾಂತ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರಾಜು ನಾಯ್ಕ್, ನಾಗಪ್ಪ, ಆಶಾ ಸುಂದರ, ರೋಹಿನಿ ಪ್ರಕಾಶ್ ಉಪಸ್ಥಿತರಿದ್ದರು.

ಎಂಟು ಗ್ರಾಮ ವ್ಯಾಪ್ತಿಯ ಸೊಸೈಟಿ ವೇಣೂರು, ಮೂಡುಕೋಡಿ, ಕರಿಮಣೇಲು, ನಿಟ್ಟಡೆ, ಕುಕ್ಕೇಡಿ, ಅಂಡಿಂಜೆ, ಬಜಿರೆ ಹಾಗೂ ಗುಂಡೂರಿ ಗ್ರಾಮಗಳ ವ್ಯಾಪ್ತಿಗೆ ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ರಿಂದ 2029-30ರವರೆಗಿನ ಅವಧಿಗೆ ಜ.12 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಭಾರತೀಯ ಜನತಾ ಪಾರ್ಟಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಗೌರವಿಸಲಾಯಿತು.ಜಯಂತ್ ಕೋಟ್ಯಾನ್ ಸೇರಿದಂತೆ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಂ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಮತ್ತು ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!