25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಂಟು ಗ್ರಾಮಗಳನ್ನು ಒಳಗೊಂಡ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಯ ಅಧ್ಯಕ್ಷರಾಗಿ, ಉದ್ಯಮಿ, ಸಮಾಜಸೇವಕ, ಸಂಘಟಕ ಸುಂದರ ಹೆಗ್ಡೆ ಬಿಇ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಬರ್ಕಜೆ ಫೆ.19 ರಂದು ಅವಿರೋಧವಾಗಿ ಆಯ್ಕೆಯಾದರು.

ನಿರ್ದೇಶಕರುಗಳಾದ ರಾಮದಾಸ ನಾಯಕ್, ಸಂದೀಪ್ ಹೆಗ್ಡೆ, ಸಂತೋಷ್ ಜೈನ್, ಪ್ರವೀಣ್ ಪರಿಯೊಟ್ಟು,ಪ್ರಶಾಂತ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರಾಜು ನಾಯ್ಕ್, ನಾಗಪ್ಪ, ಆಶಾ ಸುಂದರ, ರೋಹಿನಿ ಪ್ರಕಾಶ್ ಉಪಸ್ಥಿತರಿದ್ದರು.

ಎಂಟು ಗ್ರಾಮ ವ್ಯಾಪ್ತಿಯ ಸೊಸೈಟಿ ವೇಣೂರು, ಮೂಡುಕೋಡಿ, ಕರಿಮಣೇಲು, ನಿಟ್ಟಡೆ, ಕುಕ್ಕೇಡಿ, ಅಂಡಿಂಜೆ, ಬಜಿರೆ ಹಾಗೂ ಗುಂಡೂರಿ ಗ್ರಾಮಗಳ ವ್ಯಾಪ್ತಿಗೆ ಒಳಗೊಂಡಿರುವ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ರಿಂದ 2029-30ರವರೆಗಿನ ಅವಧಿಗೆ ಜ.12 ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ 12 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿ ಪ್ರತಿಮಾ ಚುನಾವಣಾ ಪ್ರಕ್ರಿಯೆ ನಡೆಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಭಾರತೀಯ ಜನತಾ ಪಾರ್ಟಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರನ್ನು ಗೌರವಿಸಲಾಯಿತು.ಜಯಂತ್ ಕೋಟ್ಯಾನ್ ಸೇರಿದಂತೆ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!