25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು
ಅವಕಾಶವಂಚಿತರಾಗಬಾರದೆಂಬ ಸದುದ್ದೇಶದಿಂದ ಸಂಸ್ಥೆಯನ್ನು ಕಟ್ಟಿಬೆಳೆಸಿದ ಸಂಸ್ಥಾಪಕರಾದ ದಿ.ರೋಹಿನಾಥ ಪಾದೆಯವರ ಕನಸಿನಂತೆ, ಸಂಸ್ಥೆಯನ್ನು ಮುನ್ನಡೆಸುತ್ತಿರುವ ಸಂಚಾಲಕರಾದ ಶ್ರೀಮತಿ ಬಬಿತಾ.ಆರ್.ನಾಥ್ ಹಾಗೂ ಕಾರ್ಯದರ್ಶಿಗಳಾದ ಶಿವಾನಿ.ಆರ್.ನಾಥ್ ಇವರ ಅಭಿಲಾಷೆಯಂತೆ ಇಲ್ಲಿನ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಜ್ಞಾನವನ್ನು ಮೂಡಿಸುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಮತ್ತು ಯೋಚನೆಯೊಂದಿಗೆ ವಿದ್ಯಾಸಂಸ್ಥೆಯು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪೂರಕ ಶಿಕ್ಷಣದ ಅನಿವಾರ್ಯತೆಯನ್ನು ಅರಿತು ಪದವಿಯೊಂದಿಗೆ ವಿದ್ಯಾರ್ಥಿಗಳು ತಮ್ಮನ್ನು ಸ್ಪರ್ಧಾತ್ಮಕವಾಗಿ ತೊಡಗಿಸಿಕೊಂಡು ಹೊರಜಗತ್ತಿಗೆ ತೆರೆದುಕೊಳ್ಳಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಇದೀಗ ಐಬಿಪಿಎಸ್ ಬ್ಯಾಂಕಿಂಗ್ ತರಬೇತಿಯನ್ನು ಕಾಲೇಜಿನಲ್ಲಿಯೇ ಉಚಿತವಾಗಿ ನೀಡಬೇಕೆಂದು ಸಂಸ್ಥೆಯ ಆಡಳಿತ ಮಂಡಳಿಯ ಸಹಕಾರದೊಂದಿಗೆ ಉಚಿತ ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷಾ ತರಬೇತಿಗೆ ಫೆ.18 ರಂದು ಅಧೀಕೃತವಾಗಿ ಚಾಲನೆಯನ್ನು ನೀಡಿ ತರಬೇತಿಯನ್ನು ಆರಂಭಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್.ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥೆ, ದೀಕ್ಷಿತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ , ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಅಧೀಕೃತವಾಗಿ ಚಾಲನೆಯನ್ನು ನೀಡುವ ಮೂಲಕ ಯಶಸ್ವಿಯಾಗಿ ನೆರವೇರಿತು .

ಪದವಿ ವಿಭಾಗದ ಉಪನ್ಯಾಸಕಿ ಶ್ರೀಮತಿ ಗೀತಾ ಡಿ ಹಾಗೂ ಕು. ರೂಪಾಕ್ಷಿ ಇವರು ಐಬಿಪಿಎಸ್ ತರಬೇತಿ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

Related posts

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya
error: Content is protected !!