23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು
ಅವಕಾಶವಂಚಿತರಾಗಬಾರದೆಂಬ ಸದುದ್ದೇಶದಿಂದ ಸಂಸ್ಥೆಯನ್ನು ಕಟ್ಟಿಬೆಳೆಸಿದ ಸಂಸ್ಥಾಪಕರಾದ ದಿ.ರೋಹಿನಾಥ ಪಾದೆಯವರ ಕನಸಿನಂತೆ, ಸಂಸ್ಥೆಯನ್ನು ಮುನ್ನಡೆಸುತ್ತಿರುವ ಸಂಚಾಲಕರಾದ ಶ್ರೀಮತಿ ಬಬಿತಾ.ಆರ್.ನಾಥ್ ಹಾಗೂ ಕಾರ್ಯದರ್ಶಿಗಳಾದ ಶಿವಾನಿ.ಆರ್.ನಾಥ್ ಇವರ ಅಭಿಲಾಷೆಯಂತೆ ಇಲ್ಲಿನ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಜ್ಞಾನವನ್ನು ಮೂಡಿಸುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಮತ್ತು ಯೋಚನೆಯೊಂದಿಗೆ ವಿದ್ಯಾಸಂಸ್ಥೆಯು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪೂರಕ ಶಿಕ್ಷಣದ ಅನಿವಾರ್ಯತೆಯನ್ನು ಅರಿತು ಪದವಿಯೊಂದಿಗೆ ವಿದ್ಯಾರ್ಥಿಗಳು ತಮ್ಮನ್ನು ಸ್ಪರ್ಧಾತ್ಮಕವಾಗಿ ತೊಡಗಿಸಿಕೊಂಡು ಹೊರಜಗತ್ತಿಗೆ ತೆರೆದುಕೊಳ್ಳಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಇದೀಗ ಐಬಿಪಿಎಸ್ ಬ್ಯಾಂಕಿಂಗ್ ತರಬೇತಿಯನ್ನು ಕಾಲೇಜಿನಲ್ಲಿಯೇ ಉಚಿತವಾಗಿ ನೀಡಬೇಕೆಂದು ಸಂಸ್ಥೆಯ ಆಡಳಿತ ಮಂಡಳಿಯ ಸಹಕಾರದೊಂದಿಗೆ ಉಚಿತ ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷಾ ತರಬೇತಿಗೆ ಫೆ.18 ರಂದು ಅಧೀಕೃತವಾಗಿ ಚಾಲನೆಯನ್ನು ನೀಡಿ ತರಬೇತಿಯನ್ನು ಆರಂಭಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್.ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥೆ, ದೀಕ್ಷಿತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ , ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಅಧೀಕೃತವಾಗಿ ಚಾಲನೆಯನ್ನು ನೀಡುವ ಮೂಲಕ ಯಶಸ್ವಿಯಾಗಿ ನೆರವೇರಿತು .

ಪದವಿ ವಿಭಾಗದ ಉಪನ್ಯಾಸಕಿ ಶ್ರೀಮತಿ ಗೀತಾ ಡಿ ಹಾಗೂ ಕು. ರೂಪಾಕ್ಷಿ ಇವರು ಐಬಿಪಿಎಸ್ ತರಬೇತಿ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya
error: Content is protected !!