30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!