25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ತೆಂಕಕಾರಂದೂರು: ಹಿಂದೂ ಸಂಗಮ ಬಳಂಜ ಮಂಡಲ ಆಮಂತ್ರಣ ಪತ್ರಿಕೆ ಬಿಡುಗಡೆ: ಜ 25 ಬಳಂಜ ಮಂಡಲದಿಂದ ಬೃಹತ್ ಹಿಂದೂ‌‌ ಸಂಗಮ ಶೋಭಾಯಾತ್ರೆ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಮತದಾರರ ಪಟ್ಟಿ ಮ್ಯಾಪಿಂಗ್ ಮಾಡಿಸಿ-ಜಿಲ್ಲಾ ಚುನಾವಣಾಧಿಕಾರಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಧಾರ್ಮಿಕ ಕ್ಷೇತ್ರಗಳ ಪ್ರವಾಸ

Suddi Udaya

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!