ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya
error: Content is protected !!