July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

ನಾವೂರು: ಕಳೆದ 6 ವರ್ಷಗಳ ಹಿಂದೆ ಪ್ರಾರಂಭಗೊಂಡ ನಾವೂರು ಹೊಡಿಕ್ಕಾರು ರಸ್ತೆಯ ಕಾಮಗಾರಿ ಇಲ್ಲಿಯವರೆಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಶಾಸಕರ ಗಮನಕ್ಕೆ ತಂದಾಗ ಅವರು ಆಶ್ವಾಸನೆ ನೀಡಿದ್ದರೂ ಕೂಡ ಇಲ್ಲಿಯವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ.

ಪ್ರಾರಂಭದಲ್ಲಿ ತ್ವರಿತಗತಿಯಲ್ಲಿ ಕೆಲಸವನ್ನು ಮಾಡುವುದಾಗಿ ತಿಳಿಸಿರುವ ಗುತ್ತಿಗೆದಾರ 6 ವರುಷಗಳು ಕಳೆದರೂ ಇಲ್ಲಿಯವರೆಗೆ ಕಾಮಗಾರಿಯನ್ನು ಆಮೆಗತಿಯಲ್ಲಿ ಮಾಡಿಕೊಂಡು ಬಂದಿರುತ್ತಾರೆ. ಹಿಂದಿನ ಡಾಂಬರು ರಸ್ತೆಯನ್ನು ಅಗೆದು ಸ್ವಲ್ಪಕಾಂಕ್ರೀಟ್ ಹಾಕಿದ್ದಾರೆ. ಉಳಿದ ಭಾಗದಲ್ಲಿ ಜಲ್ಲಿಯನ್ನು ಹಾಕಿ ಹೋದವರು ಇಲ್ಲಿಯವರೆಗೆ ಕಾಮಗಾರಿ ಪ್ರಾರಂಭ ಮಾಡಿರುವುದಿಲ್ಲ. ಸ್ಥಳೀಯ ಜನಪ್ರತಿನಿಧಿಗಳು ಸ್ಪಂದಿಸುವುದಿಲ್ಲ

ಇದರಿಂದ ಆಕ್ರೋಶಗೊಂಡ ಈ ಭಾಗದ ಜನರು ರಸ್ತೆಯಲ್ಲಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳದೆ ಹೋದರೆ ಈ ಭಾಗದ ಜನರೇ ಹಣ ಸಂಗ್ರಹಿಸಿ ಗುತ್ತಿಗೆದಾರ ಹಾಕಿದ ಜಲ್ಲಿಯನ್ನು ತೆಗೆಯುವುದರ ಜೊತೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಯನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ.

Related posts

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya
error: Content is protected !!