25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 -2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಮ್.ಬಿ.ಕೆ ಸೇವಿತ ಒಕ್ಕೂಟದ ವಾರ್ಷಿಕ ವರದಿ ಹಾಗೂ ಒಕ್ಕೂಟದ ಆಯವ್ಯಯ ಮಂಡಿಸಿ ಅನುಮೋದನೆಯನ್ನು ಪಡೆದರು. ವಲಯ ಮೇಲ್ವಿಚಾರಕರಾದ ಜಯಾನಂದರವರು ಪ್ರಾಸ್ತವಿಕವಾಗಿ ಮಾತನಾಡಿ ವಾರ್ಷಿಕ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು. ಗೋಪಿಕಾ ಸಂಜೀವಿನಿ ಸದಸ್ಯರು ಮಾಡಿದ ರಾಗಿಹುಡಿ ಯನ್ನು ಬಿಡುಗಡೆ ಮಾಡಲಾಯಿತು. ರಾಜ್ಯ ಪ್ರಶಸ್ತಿ ಪಡೆದ ಜಯಾನಂದರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ರಕ್ಷಿತ್ ಜೈನ್ ಸಾಮಾಜಿಕ ಲೆಕ್ಕ ಪರಿಶೋದನೆಯ ಜಿಲ್ಲಾ ಸಂಯೋಜಕರು ಎನ್ ಆರ್.ಎಲ್.ಎಂ ಬಗ್ಗೆ ಮಾತನಾಡಿದರು. ಸಂಘದ ಸದಸ್ಯರು “ನಮ್ಮ ಕಸ ” ನಮ್ಮ ಜವಾಬ್ದಾರಿ ” ಎಂಬ ವಿಷಯ ಬಗ್ಗೆ ಕಿರು ಪ್ರಹಸನ ದ ಮೂಲಕ ಸಂದೇಶ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ, ಶಕ್ತಿ ಸಂಜೀವಿನಿ ಸಂಘದ ಸದಸ್ಯೆ ಎವುಲಿನ ಡಿಸಿಲ್ವ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಲಕ್ಕಿ ಗೇಮ್ ನಲ್ಲಿ ಬಹುಮಾನವನ್ನು ಸಂಘದ ಸದಸ್ಯರಾದ ಯಮುನಾ, ಪ್ರಿಯದರ್ಶಿನಿ, ಬಾಲಕ ಇವರು ಪಡೆದುಕೊಂಡರು.

ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಅಧ್ಯಕ್ಷಿಯ ಭಾಷಣ ಮಾಡಿದರು. ಕೃಷಿ ಸಖಿ ಹರಿಣಾಕ್ಷಿ ನಿರೂಪಣೆ ಮಾಡಿ ಎಲ್.ಸಿಆರ್.ಪಿ ಜಯಂತಿ ಸ್ವಾಗತಿಸಿದರು. ಎಮ್ ಬಿಕೆ ಸೇವಿತ ಧನ್ಯವಾದವಿತ್ತರು

Related posts

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!