September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2023 -2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಮ್.ಬಿ.ಕೆ ಸೇವಿತ ಒಕ್ಕೂಟದ ವಾರ್ಷಿಕ ವರದಿ ಹಾಗೂ ಒಕ್ಕೂಟದ ಆಯವ್ಯಯ ಮಂಡಿಸಿ ಅನುಮೋದನೆಯನ್ನು ಪಡೆದರು. ವಲಯ ಮೇಲ್ವಿಚಾರಕರಾದ ಜಯಾನಂದರವರು ಪ್ರಾಸ್ತವಿಕವಾಗಿ ಮಾತನಾಡಿ ವಾರ್ಷಿಕ ಮಹಾಸಭೆಯ ಉದ್ದೇಶ ಮತ್ತು ಜವಾಬ್ದಾರಿಯ ಬಗ್ಗೆ ವಿಸ್ತಾರವಾದ ಮಾಹಿತಿಯನ್ನು ನೀಡಿದರು. ಗೋಪಿಕಾ ಸಂಜೀವಿನಿ ಸದಸ್ಯರು ಮಾಡಿದ ರಾಗಿಹುಡಿ ಯನ್ನು ಬಿಡುಗಡೆ ಮಾಡಲಾಯಿತು. ರಾಜ್ಯ ಪ್ರಶಸ್ತಿ ಪಡೆದ ಜಯಾನಂದರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ರಕ್ಷಿತ್ ಜೈನ್ ಸಾಮಾಜಿಕ ಲೆಕ್ಕ ಪರಿಶೋದನೆಯ ಜಿಲ್ಲಾ ಸಂಯೋಜಕರು ಎನ್ ಆರ್.ಎಲ್.ಎಂ ಬಗ್ಗೆ ಮಾತನಾಡಿದರು. ಸಂಘದ ಸದಸ್ಯರು “ನಮ್ಮ ಕಸ ” ನಮ್ಮ ಜವಾಬ್ದಾರಿ ” ಎಂಬ ವಿಷಯ ಬಗ್ಗೆ ಕಿರು ಪ್ರಹಸನ ದ ಮೂಲಕ ಸಂದೇಶ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಗೌಡ, ಶಕ್ತಿ ಸಂಜೀವಿನಿ ಸಂಘದ ಸದಸ್ಯೆ ಎವುಲಿನ ಡಿಸಿಲ್ವ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಲಕ್ಕಿ ಗೇಮ್ ನಲ್ಲಿ ಬಹುಮಾನವನ್ನು ಸಂಘದ ಸದಸ್ಯರಾದ ಯಮುನಾ, ಪ್ರಿಯದರ್ಶಿನಿ, ಬಾಲಕ ಇವರು ಪಡೆದುಕೊಂಡರು.

ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಅಧ್ಯಕ್ಷಿಯ ಭಾಷಣ ಮಾಡಿದರು. ಕೃಷಿ ಸಖಿ ಹರಿಣಾಕ್ಷಿ ನಿರೂಪಣೆ ಮಾಡಿ ಎಲ್.ಸಿಆರ್.ಪಿ ಜಯಂತಿ ಸ್ವಾಗತಿಸಿದರು. ಎಮ್ ಬಿಕೆ ಸೇವಿತ ಧನ್ಯವಾದವಿತ್ತರು

Related posts

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಬಂದಾರು ಗಿರಿಯಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!