25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya
error: Content is protected !!