July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!