September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನೆರಿಯ :ಇಲ್ಲಿಯ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/- ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.

ಫಾತಿಮತ್ ರಂಝೀನ್ ರವರ ದೂರಿನಂತೆ, ಫೆ. 19 ರಂದು ಬೆಳಿಗ್ಗೆ ನೆರಿಯಾ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಸುಮಾರು ಬೆಳಿಗ್ಗೆ 9.30 ಗಂಟೆಗೆ ತನ್ನ ಮನೆಯಲ್ಲಿರುವ ಕೋಣೆಗೆ ಹೋದಾಗ ಗೋದ್ರೆಜ್ ನ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದು, ಗೋದ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಈ ಬಗ್ಗೆ ಫಾತಿಮತ್ ರಂಝೀನ್ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಅವರ ಬಾಬ್ತು ಸುಮಾರು ರೂ. 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya
error: Content is protected !!