ಅಂಡಿಂಜೆ ಗ್ರಾಮದ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆಯನ್ನು ವೇಣೂರು ಪ್ರಕಾಶ್ ಪುರೋಹಿತರ ಆಚಾರ್ಯತ್ವದಲ್ಲಿ ಜರಗಿಸಲಾಯಿತು.
ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ ಕಾರ್ಕಳ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ, ಅಮರ ಶಿಲ್ಪಿ ಜಕಣಾಚಾರ್ಯ ಪ್ರಶಸ್ತಿ ಪುರಸ್ಕೃತ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು, ಮೂಡಬಿದ್ರಿ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಾಂತಲಾ ಸೀತಾರಾಮ ಆಚಾರ್ಯ, ಮೂಡಬಿದ್ರಿಯ ಉದ್ಯಮಿ ಗಣೇಶ ಆಚಾರ್ಯ ಹೊಸ್ಮಾರ್, ಕೂಡುವಳಿಕೆ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಕಜೆ, ಹಾಗೂ ಪುರೋಹಿತ್ ಪ್ರಕಾಶ್ ಆಚಾರ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕಂಪೆನಿಗಳಲ್ಲಿ ಉದ್ಯೋಗವನ್ನು ತೊಡಗಿಸಿಕೊಂಡಿದ್ದು ,ಪ್ರಸ್ತುತ ಅರ್ವ ಎಂಟರ್ಪ್ರೈಸಸ್ ಎಂಬ ಸಂಸ್ಥೆಯಲ್ಲಿ ಬೀಡಿ, ಗೇರುಬೀಜ ಸಮೇತ ವಿವಿಧ ಕಂಪೆನಿಗಳಿಗೆ ಭವಿಷ್ಯನಿಧಿ(ಪಿ ಎಫ್) ಮಾರ್ಗದರ್ಶಕರಾಗಿ ಯಶಸ್ವಿಯಾಗಿದ್ದು, ಅದಕ್ಕಾಗಿ ವಿವಿಧ ಕಂಪೆನಿಗಳಿಂದ ಪುರಸ್ಕೃತ ಸುಬ್ರಹ್ಮಣ್ಯ ಆಚಾರ್ಯ ಪಾಲಬೆ ಅರುವ ,ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಆದರ್ಶ್ ಅಂಡಿಂಜೆ, 2024 ರ ಪಿಯುಸಿ ಪರೀಕ್ಷೆಯಲ್ಲಿ ಸರಕಾರಿ ಪ ಪೂ ಕಾಲೇಜಿನಲ್ಲಿ ಅತ್ಯಧಿಕ ಅಂಕ ಗಳಿಸಿರುವ ಕು.ಸಾನಿಧ್ಯ ಬಿ ಕೆ ಆಚಾರ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.
ಡಿ ಭಾಸ್ಕರ ಆಚಾರ್ಯರು ಪ್ರಾರ್ಥನೆಯೊಂದಿಗೆ ಸ್ವಾಗತಿಸಿದ ಕಾರ್ಯಕ್ರಮವನ್ನು ಕು ಸಾನಿಧ್ಯ ಬಿ ಕೆ ನಿರೂಪಿಸಿದರು.