September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

ಕಕ್ಯಪದವು : ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು
ಅವಕಾಶವಂಚಿತರಾಗಬಾರದೆಂಬ ಸದುದ್ದೇಶದಿಂದ ಸಂಸ್ಥೆಯನ್ನು ಕಟ್ಟಿಬೆಳೆಸಿದ ಸಂಸ್ಥಾಪಕರಾದ ದಿ.ರೋಹಿನಾಥ ಪಾದೆಯವರ ಕನಸಿನಂತೆ, ಸಂಸ್ಥೆಯನ್ನು ಮುನ್ನಡೆಸುತ್ತಿರುವ ಸಂಚಾಲಕರಾದ ಶ್ರೀಮತಿ ಬಬಿತಾ.ಆರ್.ನಾಥ್ ಹಾಗೂ ಕಾರ್ಯದರ್ಶಿಗಳಾದ ಶಿವಾನಿ.ಆರ್.ನಾಥ್ ಇವರ ಅಭಿಲಾಷೆಯಂತೆ ಇಲ್ಲಿನ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಜ್ಞಾನವನ್ನು ಮೂಡಿಸುವ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಮತ್ತು ಯೋಚನೆಯೊಂದಿಗೆ ವಿದ್ಯಾಸಂಸ್ಥೆಯು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಪೂರಕ ಶಿಕ್ಷಣದ ಅನಿವಾರ್ಯತೆಯನ್ನು ಅರಿತು ಪದವಿಯೊಂದಿಗೆ ವಿದ್ಯಾರ್ಥಿಗಳು ತಮ್ಮನ್ನು ಸ್ಪರ್ಧಾತ್ಮಕವಾಗಿ ತೊಡಗಿಸಿಕೊಂಡು ಹೊರಜಗತ್ತಿಗೆ ತೆರೆದುಕೊಳ್ಳಬೇಕೆಂಬ ಉದ್ದೇಶವನ್ನಿಟ್ಟುಕೊಂಡು ಇದೀಗ ಐಬಿಪಿಎಸ್ ಬ್ಯಾಂಕಿಂಗ್ ತರಬೇತಿಯನ್ನು ಕಾಲೇಜಿನಲ್ಲಿಯೇ ಉಚಿತವಾಗಿ ನೀಡಬೇಕೆಂದು ಸಂಸ್ಥೆಯ ಆಡಳಿತ ಮಂಡಳಿಯ ಸಹಕಾರದೊಂದಿಗೆ ಉಚಿತ ಐಬಿಪಿಎಸ್ ಬ್ಯಾಂಕಿಂಗ್ ಪರೀಕ್ಷಾ ತರಬೇತಿಗೆ ಫೆ.18 ರಂದು ಅಧೀಕೃತವಾಗಿ ಚಾಲನೆಯನ್ನು ನೀಡಿ ತರಬೇತಿಯನ್ನು ಆರಂಭಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್.ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥೆ, ದೀಕ್ಷಿತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ , ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಅಧೀಕೃತವಾಗಿ ಚಾಲನೆಯನ್ನು ನೀಡುವ ಮೂಲಕ ಯಶಸ್ವಿಯಾಗಿ ನೆರವೇರಿತು .

ಪದವಿ ವಿಭಾಗದ ಉಪನ್ಯಾಸಕಿ ಶ್ರೀಮತಿ ಗೀತಾ ಡಿ ಹಾಗೂ ಕು. ರೂಪಾಕ್ಷಿ ಇವರು ಐಬಿಪಿಎಸ್ ತರಬೇತಿ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya
error: Content is protected !!